ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ 
ದೇಶ

ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ 'ನಕಲಿ ಎನ್ಕೌಂಟರ್' ಬಳಸುತ್ತಿದೆ: ಅಖಿಲೇಶ್ ಯಾದವ್ ಕಿಡಿ

ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ 'ನಕಲಿ ಎನ್‌ಕೌಂಟರ್'ಗಳನ್ನು ಬಳಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಆರೋಪಿಸಿದ್ದಾರೆ.

ಲಖನೌ: ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ 'ನಕಲಿ ಎನ್‌ಕೌಂಟರ್'ಗಳನ್ನು ಬಳಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಆರೋಪಿಸಿದ್ದಾರೆ.

ಝಾನ್ಸಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಅಹ್ಮದ್'ನನ್ನು ಉತ್ತರಪ್ರದೇಶದ ಪೊಲೀಸರು ಹತ್ಯೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್ ಅವರು, ನಕಲಿ ಎನ್‌ಕೌಂಟರ್‌ಗಳನ್ನು ನಡೆಸುವ ಮೂಲಕ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ನ್ಯಾಯಾಲಯದ ಮೇಲೆ ನಂಬಿಕೆಯೇ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಕೂಲಂಕುಷವಾಗಿ ತನಿಖೆ ನಡೆಸಬೇಕು. ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು. ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸುವ ಹಕ್ಕು ಸರ್ಕಾರಕ್ಕೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಉತ್ತರಪ್ರದೇಶ ನಾಗರಿಕ ಸಂಸ್ಥೆ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ ಇದ್ದು, ಈ ನಡುವಲ್ಲೇ ಅಸಾಹ್ ಅಹ್ಮದ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ