ವಿದ್ಯಾರ್ಥಿಗಳು (ಸಂಗ್ರಹ ಚಿತ್ರ) 
ದೇಶ

ರಾಜ್ಯಗಳಲ್ಲಿ ಬೋರ್ಡ್, ಶಾಲೆಗಳು ಎನ್ ಸಿಇಆರ್ ಟಿ ಪುಸ್ತಕಗಳನ್ನು ಸೂಚಿಸಿ: ಎನ್ ಸಿಪಿಸಿಆರ್

ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್​ಸಿಇಆರ್​ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ನವದೆಹಲಿ: ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್​ಸಿಇಆರ್​ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
  
ಎನ್ ಸಿಇಆರ್ ಟಿ ಪ್ರಕಟಿತ ಪುಸ್ತಕಗಳನ್ನು ಕೊಂಡೊಯ್ದರೆ ಶಾಲೆಗಳು ಅಂತಹ ಯಾವುದೇ ಮಕ್ಕಳನ್ನೂ ತಾರತಮ್ಯ, ಕಿರುಕುಳ ಅಥವಾ ನಿರ್ಲಕ್ಷ್ಯ ದೃಷ್ಟಿಯಿಂದ ನೋಡಿ, ಮಾನಸಿಕ ಅಥವಾ ದೈಹಿಕ ನೋವಿಗೆ ಕಾರಣವಾಗಬಾರದು ಎಂದು ಎನ್ ಸಿಪಿಸಿಆರ್ ಹೇಳಿದೆ.

ಮಕ್ಕಳ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ, ಬಾಲಾಪರಾಧ ನ್ಯಾಯ ಕಾಯಿದೆ, 2015 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ ಎಂದು ಏ.13 ರ ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯವು ಹೊರಡಿಸಿದ ನಿರ್ದೇಶನಗಳನ್ನು ಅವರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಬೇಕು ಎಂದು ಆಯೋಗ ಎಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಹೇಳಿದೆ.

ಶಾಲೆಗಳು ಖಾಸಗಿ ಪ್ರಕಾಶಕರ ಪುಸ್ತಕಗಳನ್ನು ಮಾರಾಟ ಮಾಡಲು ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಶಾಲೆಗಳು ಪೋಷಕರಿಗೆ ಖಾಸಗಿ ಪ್ರಕಾಶಕರ ಪುಸ್ತಕಗಳನ್ನು ಖರೀದಿಸಲು ಒತ್ತಡ ಹೇರುತ್ತಿರುವುದರ ಬಗ್ಗೆ ನಮಗೆ ದೇಶಾದ್ಯಂತ ದೂರುಗಳು ಬರುತ್ತಿವೆ, ಖಾಸಗಿ ಶಾಲೆಗಳು ಪೋಷಕರಿಂದ ಹಣ ವಸೂಲಿ ಮಾಡುತ್ತಿವೆ. 1 ರಿಂದ 12 ನೇ ತರಗತಿ ವರೆಗೆ ಎಲ್ಲಾ ಶಾಲೆಗಳು NCERT ಪುಸ್ತಕಗಳನ್ನೇ ಸೂಚಿಸಬೇಕು ಎಂದು NCPCR ಅಧ್ಯಕ್ಷೆ ಪ್ರಿಯಾಂಕಾ ಕಾನೂಂಗೊ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT