ವಿದ್ಯಾರ್ಥಿಗಳು (ಸಂಗ್ರಹ ಚಿತ್ರ) 
ದೇಶ

ರಾಜ್ಯಗಳಲ್ಲಿ ಬೋರ್ಡ್, ಶಾಲೆಗಳು ಎನ್ ಸಿಇಆರ್ ಟಿ ಪುಸ್ತಕಗಳನ್ನು ಸೂಚಿಸಿ: ಎನ್ ಸಿಪಿಸಿಆರ್

ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್​ಸಿಇಆರ್​ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ನವದೆಹಲಿ: ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್​ಸಿಇಆರ್​ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
  
ಎನ್ ಸಿಇಆರ್ ಟಿ ಪ್ರಕಟಿತ ಪುಸ್ತಕಗಳನ್ನು ಕೊಂಡೊಯ್ದರೆ ಶಾಲೆಗಳು ಅಂತಹ ಯಾವುದೇ ಮಕ್ಕಳನ್ನೂ ತಾರತಮ್ಯ, ಕಿರುಕುಳ ಅಥವಾ ನಿರ್ಲಕ್ಷ್ಯ ದೃಷ್ಟಿಯಿಂದ ನೋಡಿ, ಮಾನಸಿಕ ಅಥವಾ ದೈಹಿಕ ನೋವಿಗೆ ಕಾರಣವಾಗಬಾರದು ಎಂದು ಎನ್ ಸಿಪಿಸಿಆರ್ ಹೇಳಿದೆ.

ಮಕ್ಕಳ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ, ಬಾಲಾಪರಾಧ ನ್ಯಾಯ ಕಾಯಿದೆ, 2015 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ ಎಂದು ಏ.13 ರ ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯವು ಹೊರಡಿಸಿದ ನಿರ್ದೇಶನಗಳನ್ನು ಅವರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಬೇಕು ಎಂದು ಆಯೋಗ ಎಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಹೇಳಿದೆ.

ಶಾಲೆಗಳು ಖಾಸಗಿ ಪ್ರಕಾಶಕರ ಪುಸ್ತಕಗಳನ್ನು ಮಾರಾಟ ಮಾಡಲು ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಶಾಲೆಗಳು ಪೋಷಕರಿಗೆ ಖಾಸಗಿ ಪ್ರಕಾಶಕರ ಪುಸ್ತಕಗಳನ್ನು ಖರೀದಿಸಲು ಒತ್ತಡ ಹೇರುತ್ತಿರುವುದರ ಬಗ್ಗೆ ನಮಗೆ ದೇಶಾದ್ಯಂತ ದೂರುಗಳು ಬರುತ್ತಿವೆ, ಖಾಸಗಿ ಶಾಲೆಗಳು ಪೋಷಕರಿಂದ ಹಣ ವಸೂಲಿ ಮಾಡುತ್ತಿವೆ. 1 ರಿಂದ 12 ನೇ ತರಗತಿ ವರೆಗೆ ಎಲ್ಲಾ ಶಾಲೆಗಳು NCERT ಪುಸ್ತಕಗಳನ್ನೇ ಸೂಚಿಸಬೇಕು ಎಂದು NCPCR ಅಧ್ಯಕ್ಷೆ ಪ್ರಿಯಾಂಕಾ ಕಾನೂಂಗೊ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT