ಅರವಿಂದ ಕೇಜ್ರಿವಾಲ್ 
ದೇಶ

ನ್ಯಾಯಾಲಯಕ್ಕೆ ಸುಳ್ಳು ಹೇಳಿಕೆ: ಸಿಬಿಐ, ಇಡಿ ವಿರುದ್ಧ ಮೊಕದ್ದಮೆ ಹೂಡುತ್ತೇನೆ ಎಂದ ಕೇಜ್ರಿವಾಲ್

ಸುಳ್ಳು ಸಾಕ್ಷಿ ಮತ್ತು ನ್ಯಾಯಾಲಯಗಳಲ್ಲಿ ಸುಳ್ಳು ಅಫಿಡವಿಟ್ ಸಲ್ಲಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಮೊಕದ್ದಮೆ ಹೂಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ನವದೆಹಲಿ: ಸುಳ್ಳು ಸಾಕ್ಷಿ ಮತ್ತು ನ್ಯಾಯಾಲಯಗಳಲ್ಲಿ ಸುಳ್ಳು ಅಫಿಡವಿಟ್ ಸಲ್ಲಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಮೊಕದ್ದಮೆ ಹೂಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಗೆ ಸಿಬಿಐ ಸಮನ್ಸ್ ನೀಡಿದ್ದು, ತನಿಖಾ ತಂಡದ ಪ್ರಶ್ನೆಗಳಿಗೆ ಉತ್ತರಿಸಲು ಭಾನುವಾರ ಬೆಳಗ್ಗೆ 11 ಗಂಟೆಗೆ ಬೆಳಗ್ಗೆ 11 ಗಂಟೆಗೆ ಏಜೆನ್ಸಿ ಪ್ರಧಾನ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಬಂಧಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಕೇಜ್ರಿವಾಲ್, ಕೇಂದ್ರ ತನಿಖಾ ಸಂಸ್ಥೆಗಳು ನ್ಯಾಯಾಲಯಗಳಲ್ಲಿ ಸುಳ್ಳು ಅಫಿಡವಿಟ್‌ಗಳನ್ನು ಸಲ್ಲಿಸುತ್ತಿವೆ ಎಂದು ಆರೋಪಿಸಿದರು. ಸುಳ್ಳು ಸಾಕ್ಷ್ಯ ಮತ್ತು ನ್ಯಾಯಾಲಯಗಳಲ್ಲಿ ಸುಳ್ಳು ಸಾಕ್ಷ್ಯವನ್ನು ಒದಗಿಸುವುದಕ್ಕಾಗಿ ಸಿಬಿಐ ಮತ್ತು ಇಡಿ ಅಧಿಕಾರಿಗಳ ವಿರುದ್ಧ ಸೂಕ್ತ ಪ್ರಕರಣಗಳನ್ನು ದಾಖಲಿಸುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 14 ಫೋನ್‌ಗಳನ್ನು ನಾಶಪಡಿಸಿದ್ದಾರೆ ಎಂದು ಇಡಿ ತನ್ನ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ. ಈ ಫೋನ್‌ಗಳ ಐಎಂಇಐ ಸಂಖ್ಯೆಗಳನ್ನು ಸಹ ದಾಖಲೆಗಳಲ್ಲಿ ಸೇರಿಸಲಾಗಿದೆ ಎಂದರು. 

ಈ 14 ಫೋನ್‌ಗಳಲ್ಲಿ ನಾಲ್ಕು ಇಡಿ ಮತ್ತು ಒಂದು ಸಿಬಿಐ ಬಳಿ ಇವೆ ಎಂದು ವಶಕ್ಕೆ ಪಡೆದ ಮೆಮೊ ತೋರಿಸುತ್ತದೆ. ಇತರ ಹೆಚ್ಚಿನ ಫೋನ್‌ಗಳು ಅಸ್ವಿತ್ವದಲ್ಲಿದ್ದು, ಸ್ವಯಂಸೇವಕರಿಂದ ಬಳಸುತ್ತಿವೆ. ಈ ಫೋನ್‌ಗಳ ಬಗ್ಗೆ ಇಡಿ ಮತ್ತು ಸಿಬಿಐಗೆ ತಿಳಿದಿದೆ. ಆದಾಗ್ಯೂ, ಸುಳ್ಳು ಅಫಿಡವಿಟ್‌ಗಳನ್ನು ಸಲ್ಲಿಸುವ ಮೂಲಕ ನ್ಯಾಯಾಲಯವನ್ನು ಹಾದಿತಪ್ಪಿಸುತ್ತಿವೆ. ಸುಳ್ಳು ತಪ್ಪೊಪ್ಪಿಗೆಗಳನ್ನು ಪಡೆಯಲು ಏಜೆನ್ಸಿಗಳು ಜನರನ್ನು ಹಿಂಸಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

"ನನ್ನ ಹೆಸರು ಮತ್ತು ಸಿಸೋಡಿಯಾ ಹೆಸರನ್ನು ಕೆಡಿಸಲು ಜನರಿಗೆ ಹೇಳಲಾಗುತ್ತಿದೆ. ನಮಗೆ ಪರಿಚಯವಿಲ್ಲದ ಚಂದನ್ ರೆಡ್ಡಿ ಎಂಬಾತಿಗೆ ಚಿತ್ರಹಿಂಸೆ ನೀಡಲಾಗಿದೆ. ಅವನ ಕಿವಿ ಮತ್ತು ಮುಖಕ್ಕೆ ಗಾಯವಾಗಿದೆ ಎಂದು ವೈದ್ಯಕೀಯ ವರದಿ ಹೇಳುತ್ತದೆ.  ಥರ್ಡ್ ಡಿಗ್ರಿ ಮೂಲಕ ಮಾನಸಿಕ ಕಿರುಕುಳ, ದೈಹಿಕ ಚಿತ್ರಹಿಂತೆ ನೀಡುವ ಮೂಲಕ ಸುಳ್ಳು ಹೇಳಿಕೆ ಪಡೆಯಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ!

ಬಾಂಗ್ಲಾ ಪ್ರಧಾನಿಯಾದ ಬೆನ್ನಲ್ಲೇ ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ, ಆರೋಪ?

ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

SCROLL FOR NEXT