'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭ 
ದೇಶ

ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪದಿಂದ 8 ಮಂದಿ ಸಾವು, 123 ಜನ ಅಸ್ವಸ್ಥ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಕನಿಷ್ಠ 7-8 ಜನ ಸಾವನ್ನಪ್ಪಿದ್ದಾರೆ....

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಕನಿಷ್ಠ 7-8 ಜನ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಹೇಳಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾದ ಈ ಮೆಗಾ ಕಾರ್ಯಕ್ರಮದಲ್ಲಿ ಇಂದು 120ಕ್ಕೂ ಹೆಚ್ಚು ಜನ ಬಿಸಿಲಿನ ಝಳದಿಂದ ಡಿಹೈಡ್ರೇಶನ್ ಹಾಗೂ ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇವರಲ್ಲಿ ಹದಿಮೂರು ಜನರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಖಾರ್ಘರ್‌ನ 306 ಎಕರೆ ವಿಸ್ತಾರವಾದ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅಪ್ಪಾಸಾಹೇಬ್ ಧರ್ಮಾಧಿಕಾರಿಯ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು.

ಮಹಾರಾಷ್ಟ್ರ ಸರ್ಕಾರ ನೀಡುವ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧರ್ಮಾಧಿಕಾರಿಗೆ ಪ್ರದಾನ ಮಾಡಿದರು.

ಇಂದು ಬೆಳಗ್ಗೆಯಿಂದಲೇ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಮತ್ತು ಬೆಳಗ್ಗೆ 11.30ರ ಸುಮಾರಿಗೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆವರೆಗೆ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT