ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ 
ದೇಶ

ಆಂಧ್ರ ಪ್ರದೇಶ ಸಿಎಂಗೆ CBI ಶಾಕ್; ಕೊಲೆ ಪ್ರಕರಣದಲ್ಲಿ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಬಂಧನ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ.

ಕಡಪ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ.

ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. 

ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದಲ್ಲಿ ವೈಎಸ್​ಆರ್​ಪಿ ಕಡಪ ಸಂಸದ ವೈ.ಎಸ್ ಅವಿನಾಶ್ ರೆಡ್ಡಿ ಅವರ ತಂದೆ ಭಾಸ್ಕರ್ ರೆಡ್ಡಿಯವರನ್ನು ಸಿಬಿಐ ಬಂಧಿಸಿದೆ. 2019ರ ಮಾರ್ಚ್‌ 15 ರಂದು ವಿವೇಕಾನಂದ ರೆಡ್ಡಿ ಆಂಧ್ರಪ್ರದೇಶದ ಪುಲಿವೆಂದುಲದಲ್ಲಿರುವ ತಮ್ಮ ನಿವಾಸದಲ್ಲೇ ಹತ್ಯೆಯಾಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆಗೂ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿತ್ತು.

ರಾಜ್ಯದ ಅಪರಾಧ ತನಿಖಾ ದಳದ ವಿಶೇಷ ತನಿಖಾ ತಂಡ ಈ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿತ್ತು. ನಂತರ 2020ರ ಜುಲೈನಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಭಾಸ್ಕರ್ ರೆಡ್ಡಿ ಅವರ ಬಂಧನ 48 ಗಂಟೆಗಳಲ್ಲಿ ಸಿಬಿಐ ಬಂಧಿಸಿದ ಎರಡನೇ ವ್ಯಕ್ತಿ ಇವರಾಗಿದ್ದಾರೆ. ಕಡಪ ಸಂಸದ ವೈಎಸ್ ಅವಿನಾಶ್ ರೆಡ್ಡಿ ಅವರ ಆಪ್ತ ಗಜ್ಜಲ ಉದಯ್ ಕುಮಾರ್ ರೆಡ್ಡಿ ಅವರನ್ನು ಸಹ ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದರು.

ಭಾನುವಾರ ಬೆಳಗ್ಗೆ ಎರಡು ವಾಹನಗಳಲ್ಲಿ ಪುಲಿವೆಂದುಲದಲ್ಲಿರುವ ಭಾಸ್ಕರ್ ರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಭಾಸ್ಕರ್ ರೆಡ್ಡಿಯನ್ನು ವಶಕ್ಕೆ ಪಡೆದು ಅವರ ಕುಟುಂಬ ಸದಸ್ಯರಿಗೆ ಅರೆಸ್ಟ್​ ವಾರೆಂಟ್​ ಅನ್ನು ನೀಡಿದ್ದಾರೆ.

ಭಾಸ್ಕರ್ ರೆಡ್ಡಿ ಬಂಧನದ ವಿಷಯ ತಿಳಿಯುತ್ತಿದ್ದಂತೆ ವೈಎಸ್​ಆರ್​ಪಿ ಕಾರ್ಯಕರ್ತರು ಹಾಗೂ ಸಂಸದರ ಅನುಯಾಯಿಗಳು ಅವರ ನಿವಾಸದೆದುರು ಜಮಾಯಿಸಿದ್ದರು. ಸಿಬಿಐ ಚಾರ್ಜ್‌ಶೀಟ್ ಪ್ರಕಾರ, ಕೊಲೆಯಾದ ವಿವೇಕಾನಂದ ರೆಡ್ಡಿ ಅವರು ಕಡಪಾ ಲೋಕಸಭೆಯಿಂದ ಹಾಲಿ ಸಂಸದನಾಗಿರುವ ಅವಿನಾಶ್ ರೆಡ್ಡಿ ಬದಲಿಗೆ ತನಗೆ ಅಥವಾ ವೈಎಸ್ ಶರ್ಮಿಳಾ ಅಥವಾ ವೈಎಸ್ ವಿಜಯಮ್ಮ ಅವರಿಗೆ ಟಿಕೆಟ್ ಬಯಸಿದ್ದರು. ವಿವೇಕಾನಂದರೆಡ್ಡಿ ಆಂಧ್ರಪ್ರದೇಶದ ದಿ. ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಹೋದರ ಹಾಗೂ ಹಾಲಿ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ ಅವರ ಚಿಕ್ಕಪ್ಪ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT