ಅತೀಕ್ ಸಹೋದರರ ಕೊಲೆ 
ದೇಶ

'ನಾನು ಬೀದಿ ಹೆಣವಾಗುತ್ತೇನೆ, ಎನ್‌ಕೌಂಟರ್‌ ಮಾಡುತ್ತಾರೆ': ಅತೀಕ್‌ ಹೇಳಿದ ಮಾತು ಈಗ ನಿಜವಾಯಿತು

ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರು 2004ರಲ್ಲಿ ಚುನಾವಣಾ ರ್ಯಾಲಿಯಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತುಗಳು ಶನಿವಾರ ರಾತ್ರಿ ನಿಜವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಲಖನೌ: ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರು 2004ರಲ್ಲಿ ಚುನಾವಣಾ ರ್ಯಾಲಿಯಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತುಗಳು ಶನಿವಾರ ರಾತ್ರಿ ನಿಜವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

“ನಾನು ರಸ್ತೆ ಬದಿಯಲ್ಲಿ ಬೀದಿ ಹೆಣವಾಗುತ್ತೇನೆ. ಪೋಲೀಸರು ಅಥವಾ ಬುಡಕಟ್ಟು ಕ್ರಿಮಿನಲ್ ಗಳು  ನನ್ನನ್ನು ಎನ್‌ಕೌಂಟರ್‌ ಮಾಡುತ್ತಾರೆ ಎಂದು ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಡಾನ್ ಅತೀಕ್ ಅಹ್ಮದ್ ಅವರು 2004 ರಲ್ಲಿ ಫುಲ್‌ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದರು. ಆ ವೇಳೆ ದಿವಂಗತ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಶನಿವಾರ ರಾತ್ರಿ ದರೋಡೆಕೋರ, ಸಹೋದರ ಅಶ್ರಫ್‌ನೊಂದಿಗೆ ಕೈಕೋಳ ಹಾಕಿಕೊಂಡು ಸ್ಥಳೀಯ ಆಸ್ಪತ್ರೆಯ ಮುಂಭಾಗದ ರಸ್ತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅತೀಕ್ ಅವರು ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು.

ಬಹುಶಃ, 2004 ರಲ್ಲಿ ದರೋಡೆಕೋರ, ರಾಜಕಾರಣಿ ಹೇಳಿದ ಮಾತುಗಳು ಆತನ ಭೀಕರ ಅಪರಾಧದ ಕೃತ್ಯಗಳಿಂದಾಗಿ ಆತನಿಗಿದ್ದ ಭಯ ಮತ್ತು ಒಳನೋಟವನ್ನು ಪ್ರತಿಬಿಂಬಿಸುತ್ತವೆ.

ಒಂದು ಬಾರಿ ಸಮಾಜವಾದಿ ಪಕ್ಷದಿಂದ ಸಂಸದರಾಗಿದ್ದ ಅತೀಕ್ ಅವರು ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಐದು ಬಾರಿ ಶಾಸಕ - ಒಮ್ಮೆ ಎಸ್‌ಪಿ, ಒಮ್ಮೆ ಅಪ್ನಾ ದಳ(ಎಸ್) ಮತ್ತು ಮೂರು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!