ಪ್ರಾತಿನಿಧಿಕ ಚಿತ್ರ 
ದೇಶ

ಪತ್ರಕರ್ತರ ಸೋಗಿನಲ್ಲಿದ್ದ ವ್ಯಕ್ತಿಗಳಿಂದ ಅತೀಕ್ ಅಹ್ಮದ್ ಹತ್ಯೆ; ಪತ್ರಕರ್ತರಿಗಾಗಿ ಎಸ್ಒಪಿ ಸಿದ್ಧಪಡಿಸಲು ಕೇಂದ್ರ ನಿರ್ಧಾರ

ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಹತ್ಯೆಗೈದ ಮೂವರು ದಾಳಿಕೋರರು ಮಾಧ್ಯಮದವರಂತೆ ನಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಸಿದ್ಧಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಹತ್ಯೆಗೈದ ಮೂವರು ದಾಳಿಕೋರರು ಮಾಧ್ಯಮದವರಂತೆ ನಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಸಿದ್ಧಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ), ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು (ಎಸ್ಒಪಿ) ಸಿದ್ಧಪಡಿಸುತ್ತದೆ ಎಂದು ಅವರು ಹೇಳಿದರು.

ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಪರ್ತಕರ್ತರ ಸೋಗಿನಲ್ಲಿದ್ದ ಮೂವರು ದುಷ್ಕರ್ಮಿಗಳು ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದಾದ ಬಳಿಕ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಶನಿವಾರ ರಾತ್ರಿ ಪೊಲೀಸ್ ಸಿಬ್ಬಂದಿ ತಪಾಸಣೆಗಾಗಿ ಇಲ್ಲಿನ ವೈದ್ಯಕೀಯ ಕಾಲೇಜಿಗೆ ಅತೀಕ್ ಮತ್ತು ಸೋದರನನ್ನು ಕರೆದೊಯ್ಯುತ್ತಿದ್ದಾಗ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಆರೋಪಿಗಳು ಕೃತ್ಯ ಎಸಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT