ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಕೋವಿಡ್ ನಲ್ಲಿ ಮೃತಪಟ್ಟ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್!

ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್  ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ.

ಮಧ್ಯಪ್ರದೇಶ: ಕೋವಿಡ್-19 ಎರಡನೇ ಅಲೆಯಲ್ಲಿ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಮನೆಗೆ ವಾಪಸ್ಸಾದ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕೋವಿಡ್ ನಿಂದ ಮೃತಪಟ್ಟಿದ್ದರೆಂದು ಹೇಳಲಾಗಿದ್ದ ಕಮಲೇಶ್ ಪಾಟಿದಾರ್  ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕರೋಡ್ಕಳ ಗ್ರಾಮದ ತನ್ನ ಚಿಕ್ಕಮ್ಮನ ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾರೆ. 

ಕಮಲೇಶ್ ಮೃತಪಟ್ಟಿದ್ದಾರೆಂದು  ಅಂತ್ಯಸಂಸ್ಕಾರ ಮುಗಿಸಿದ ಎರಡು ವರ್ಷಗಳ ನಂತರ ಅವರ ಮನೆಗೆ ಬಂದಿರುವುದಾಗಿ ಕುಟುಂಬದ ಸದಸ್ಯರೊಬ್ಬರು ಹೇಳಿದ್ದಾರೆ. ಕಮಲೇಶ್ ಕೋವಿಡ್ 19 ಎರಡನೇ ಅಲೆಯಲ್ಲಿ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಪ್ರಕಟಿಸಿದ್ದರು. 

ಆಸ್ಪತ್ರೆಯವರು ಕಮಲೇಶ್ ಮೃತದೇಹವನ್ನು ನೀಡಿದ ನಂತರ ಕುಟುಂಬ ಸದಸ್ಯರು ಅಂತಿಮ ಸಂಸ್ಕಾರ ನಡೆಸಿದ್ದರು ಎಂದು ಅವರ ಸಂಬಂಧಿ ಮುಕೇಶ್ ಪಾಟಿದಾರ್ ಸುದ್ದಿಗಾರರಿಗೆ ತಿಳಿಸಿದರು.  ಆದರೆ, ಇದೀಗ ಕಮಲೇಶ್ ಮತ್ತೆ ಬದುಕಿ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಕಮಲೇಶ್ ಪಾಟಿದಾರ್ ಇಷ್ಟು ದಿನ ಎಲ್ಲಿದ್ದರು? ಆಸ್ಪತ್ರೆಯವರು ಅಂತ್ಯಕ್ರಿಯೆ ನಡೆಸಿದ ಮೃತದೇಹ ಯಾರದ್ದು? ಎಂಬೆಲ್ಲ ಪ್ರಶ್ನೆಗಳು ಮೂಡಿದ್ದು, ಕಣ್ವನ್ ಪೊಲೀಸ್ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT