ಅಸಾದುದ್ದೀನ್ ಓವೈಸಿ 
ದೇಶ

ಅತೀಕ್ ಹತ್ಯೆಯನ್ನು ಸಂಭ್ರಮಿಸುವವರು ರಣಹದ್ದುಗಳು, ಇದರಲ್ಲಿ ಯುಪಿ ಸರ್ಕಾರದ ಪಾತ್ರವಿದೆ, ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು: ಅಸಾದುದ್ದೀನ್ ಓವೈಸಿ

ಪ್ರಯಾಗ್‌ರಾಜ್‌ನಲ್ಲಿ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸೋದರ ಅಶ್ರಫ್ ಅಹ್ಮದ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯನ್ನು ಸಂಭ್ರಮಿಸುತ್ತಿರುವವರು ರಣಹದ್ದುಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ.

ಪ್ರಯಾಗ್ ರಾಜ್(ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸೋದರ ಅಶ್ರಫ್ ಅಹ್ಮದ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯನ್ನು ಸಂಭ್ರಮಿಸುತ್ತಿರುವವರು ರಣಹದ್ದುಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ.

ಗುಂಡಿಕ್ಕಿ ಹತ್ಯೆ ಮಾಡುವ ಘಟನೆಯನ್ನು "ರಕ್ತರಪಾತದ ಕೊಲೆ" ಎಂದು ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಇದರಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಪಾತ್ರವಿದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು. ಸಮಿತಿಯನ್ನು ರಚಿಸಬೇಕು, ಉತ್ತರ ಪ್ರದೇಶದ ಯಾವುದೇ ಅಧಿಕಾರಿಯನ್ನು ಸಮಿತಿಗೆ ಸೇರಿಸಬಾರದು. ಇದೊಂದು ರಕ್ತಪಾತದ ಕೊಲೆ ಎಂದು ಟೀಕಿಸಿದ್ದಾರೆ. 

ಕೊಲೆಗಾರರು ಆಯುಧಗಳನ್ನು ಹೇಗೆ ಪಡೆದರು, ಅವರನ್ನು ಕೊಂದ ನಂತರ ಏಕೆ ಧಾರ್ಮಿಕ ಘೋಷಣೆಗಳನ್ನು ಕೂಗಿದರು, ಅಂತವರನ್ನು ಭಯೋತ್ಪಾದಕರು ಎನ್ನದೆ ಬೇರೆ ಏನು ಕರೆಯಲು ಸಾಧ್ಯ, ದೇಶಪ್ರೇಮಿಗಳೆಂದು ಕರೆಯುತ್ತೀರಾ ಎಂದು ಕೇಳಿದ್ದಾರೆ.

ಈ ಘಟನೆಯು ಕಾನೂನು ಸುವ್ಯವಸ್ಥೆಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಈ ಘಟನೆಯ ನಂತರ ಸಾರ್ವಜನಿಕರಿಗೆ ಸಂವಿಧಾನ ಮತ್ತು ದೇಶದ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ನಂಬಿಕೆ ಉಳಿಯುತ್ತದೆಯೇ ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಪಾಲಿಸುತ್ತಿಲ್ಲ, ಬಂದೂಕಿನ ಆಡಳಿತದಿಂದ ಸರ್ಕಾರ ನಡೆಸುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT