ಅಜಿತ್ ಪವಾರ್ 
ದೇಶ

ಬಿಜೆಪಿ ಜೊತೆ ಕೈ ಜೋಡಿಸುವ, ಎನ್ ಸಿಪಿ ಶಾಸಕರ ಸಭೆ ಕರೆದಿರುವ ವರದಿ ತಳ್ಳಿಹಾಕಿದ ಅಜಿತ್ ಪವಾರ್

ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ. 

ಮುಂಬೈ: ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅಜಿತ್ ಪವಾರ್, "ನಾನು ಮಂಗಳವಾರದಂದು ಎನ್ ಸಿಪಿ ಶಾಸಕರ ಸಭೆಯನ್ನು ಕರೆದಿದ್ದೇನೆ ಎಂದು ಕೆಲವು ವರದಿಗಳು ಪ್ರಕಟವಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿ, ನಾನು ಶಾಸಕರ, ಪದಾಧಿಕಾರಿಗಳ ಸಭೆಯನ್ನು ಕರೆದಿಲ್ಲ ಎಂದು ಹೇಳಿದ್ದಾರೆ.

ಇನ್ನು ಎನ್ ಸಿಪಿ ಶಾಸಕರ ಕುರಿತು ವರದಿ ಪ್ರಕಟವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜ್ಯಸಭಾ ಸಂಸದ ಸಂಜಯ್ ರೌತ್, ಈ ವರದಿಗಳೆಲ್ಲಾ ಆಧಾರ ರಹಿತವಾಗಿರುವುದಾಗಿದ್ದು, ಅಜಿತ್ ಪವಾರ್ ಹಾಗೂ ಇನ್ನಿತರ ಎನ್ ಸಿಪಿ ನಾಯಕರೊಂದಿಗೆ ನಾನು ಮಾತನಾಡಿದ್ದೇನೆ. "ಇಂತಹ ಕುತಂತ್ರಗಳನ್ನು ಹರಡುವವರು ಮಹಾ ವಿಕಾಸ್ ಅಘಾಡಿ (ಎಂವಿಎ) ಅನ್ನು ದುರ್ಬಲಗೊಳಿಸಬಹುದು ಎಂದು ಭಾವಿಸಿದರೆ, ಅದು ತಪ್ಪು ಎಂದು ಹೇಳಿದ್ದಾರೆ.

ಶರದ್ ಪವಾರ್ ಹಾಗೂ ಅಜಿತ್ ಪವಾರ್ ಇತ್ತೀಚಿನ ದಿನಗಳಲ್ಲಿ ಅದಾನಿ, ಇವಿಎಂ ಸೇರಿದಂತೆ ಹಲವು ರಾಷ್ಟ್ರೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಬಗ್ಗೆ ಮೃದು ಧೋರಣೆಯಿಂದ ಮಾತನಾಡಿದ್ದು, ಎನ್ ಸಿಪಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರದ ಭಾಗವಾಗಲಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT