ಅಜಿತ್ ಪವಾರ್ 
ದೇಶ

ಬಿಜೆಪಿ ಜೊತೆ ಕೈ ಜೋಡಿಸುವ, ಎನ್ ಸಿಪಿ ಶಾಸಕರ ಸಭೆ ಕರೆದಿರುವ ವರದಿ ತಳ್ಳಿಹಾಕಿದ ಅಜಿತ್ ಪವಾರ್

ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ. 

ಮುಂಬೈ: ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅಜಿತ್ ಪವಾರ್, "ನಾನು ಮಂಗಳವಾರದಂದು ಎನ್ ಸಿಪಿ ಶಾಸಕರ ಸಭೆಯನ್ನು ಕರೆದಿದ್ದೇನೆ ಎಂದು ಕೆಲವು ವರದಿಗಳು ಪ್ರಕಟವಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿ, ನಾನು ಶಾಸಕರ, ಪದಾಧಿಕಾರಿಗಳ ಸಭೆಯನ್ನು ಕರೆದಿಲ್ಲ ಎಂದು ಹೇಳಿದ್ದಾರೆ.

ಇನ್ನು ಎನ್ ಸಿಪಿ ಶಾಸಕರ ಕುರಿತು ವರದಿ ಪ್ರಕಟವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಾಜ್ಯಸಭಾ ಸಂಸದ ಸಂಜಯ್ ರೌತ್, ಈ ವರದಿಗಳೆಲ್ಲಾ ಆಧಾರ ರಹಿತವಾಗಿರುವುದಾಗಿದ್ದು, ಅಜಿತ್ ಪವಾರ್ ಹಾಗೂ ಇನ್ನಿತರ ಎನ್ ಸಿಪಿ ನಾಯಕರೊಂದಿಗೆ ನಾನು ಮಾತನಾಡಿದ್ದೇನೆ. "ಇಂತಹ ಕುತಂತ್ರಗಳನ್ನು ಹರಡುವವರು ಮಹಾ ವಿಕಾಸ್ ಅಘಾಡಿ (ಎಂವಿಎ) ಅನ್ನು ದುರ್ಬಲಗೊಳಿಸಬಹುದು ಎಂದು ಭಾವಿಸಿದರೆ, ಅದು ತಪ್ಪು ಎಂದು ಹೇಳಿದ್ದಾರೆ.

ಶರದ್ ಪವಾರ್ ಹಾಗೂ ಅಜಿತ್ ಪವಾರ್ ಇತ್ತೀಚಿನ ದಿನಗಳಲ್ಲಿ ಅದಾನಿ, ಇವಿಎಂ ಸೇರಿದಂತೆ ಹಲವು ರಾಷ್ಟ್ರೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಬಗ್ಗೆ ಮೃದು ಧೋರಣೆಯಿಂದ ಮಾತನಾಡಿದ್ದು, ಎನ್ ಸಿಪಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರದ ಭಾಗವಾಗಲಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT