ಗ್ಯಾಂಗ್ ಸ್ಟರ್ ಅತೀಕ್ , ಅಶ್ರಫ್ 
ದೇಶ

ಗ್ಯಾಂಗ್ ಸ್ಟರ್ ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ ಎಚ್ ಆರ್ ಸಿ ನೋಟಿಸ್ ಜಾರಿ 

ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪ್ರಯಾಗ್ ರಾಜ್: ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರು ಮತ್ತು ಪ್ರಯಾಗ್‌ರಾಜ್‌ನ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ವರದಿಯನ್ನು ಆಯೋಗ ಕೇಳಿದೆ. 

ಹತ್ಯೆಗೆ ಕಾರಣವಾದ ಎಲ್ಲಾ ಅಂಶಗಳು, ಮೃತರಿಗೆ ಸಂಬಂಧಿಸಿದ ವೈದ್ಯಕೀಯ ಪ್ರಮಾಣ ಪತ್ರ, ವಿಚಾರಣೆಯ ವರದಿ, ಮರಣೋತ್ತರ ಪರೀಕ್ಷೆಯ ವರದಿ, ಮರಣೋತ್ತರ ಪರೀಕ್ಷೆಯ ಸಿಡಿ, ವೀಡಿಯೊ, ಕ್ಯಾಸೆಟ್, ಮ್ಯಾಜಿಸ್ಟ್ರಿಯಲ್ ವಿಚಾರಣೆ ವರದಿ ಸೇರಿದಂತೆ ಎಲ್ಲಾ ಮಾಹಿತಿಯನ್ನು ವರದಿಯಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ. 

ಶನಿವಾರ ರಾತ್ರಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ತಪಾಸಣೆಗಾಗಿ ಪೊಲೀಸ್ ಸಿಬ್ಬಂದಿ ಕರೆದೊಯ್ಯುತ್ತಿದ್ದಾಗ ಪ್ರಯಾಗರಾಜ್‌ನಲ್ಲಿರುವ ವೈದ್ಯಕೀಯ ಕಾಲೇಜಿನ ಹೊರಗಡೆ ಪತ್ರಕರ್ತರ ನೆಪದಲ್ಲಿ ಮೂವರು ಆರೋಪಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಈ ವರ್ಷದ ಆರಂಭದಲ್ಲಿ ಉಮೇಶ್ ಪಾಲ್ ಮತ್ತು ಅವರ ಇಬ್ಬರು ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಅವರನ್ನು ಗುಜರಾತ್ ಮತ್ತು ಬರೇಲಿ ಜೈಲುಗಳಿಂದ ಪ್ರಯಾಗ್‌ರಾಜ್‌ಗೆ ಕರೆತರಲಾಗಿತ್ತು. ಹತ್ಯೆಯ  ಭಯಾನಕ ದೃಶ್ಯಗಳು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಟಿವಿ ಚಾನೆಲ್ ಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT