ಅಜಿತ್ ಪವಾರ್ 
ದೇಶ

ಮತ್ತೊಂದು "ಮಹಾ" ರಾಜಕೀಯ ಬೆಳವಣಿಗೆ: ಬಿಜೆಪಿ ಬೆಂಬಲಿಸಲು ಅಜಿತ್ ಪವಾರ್ ಬಣದ 30 ಎನ್ ಸಿಪಿ ಶಾಸಕರು ಮುಂದು!

ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. 

ಮುಂಬೈ: ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. 

ಈಗ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿಯೊಂದಿಗೆ ಕೈ ಜೋಡಿಸಲು ಮುಂದಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕ ಸಂಜಯ್ ರೌತ್ ಇತ್ತೀಚೆಗೆ ಮಾತನಾಡಿ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ, ತಮ್ಮ ಪಕ್ಷ ಎಂದಿಗೂ ಬಿಜೆಪಿ ಜೊತೆ ಕೈ ಜೋಡಿಸುವುದಿಲ್ಲ ಎಂದು ಹೇಳಿದ್ದರು.

ಆದರೆ ಇತ್ತ ಎನ್ ಸಿಪಿಯಲ್ಲಿನ ಅಜಿತ್ ಪವಾರ್ ಅವರ ಬೆಂಬಲಿಗ ಶಾಸಕರ ಪೈಕಿ ಇಬ್ಬರು ತಾವು ಅಜಿತ್ ಪವಾರ್ ಯಾವುದೇ ನಿರ್ಧಾರ ಕೈಗೊಂಡರೂ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
 
ಇನ್ನು ಎನ್ ಸಿಪಿಯ ಹಿರಿಯ ನಾಯಕ ಪುಣೆಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದನ್ನು ರದ್ದುಗೊಳಿಸಿ ದೆಹಲಿಗೆ ಏಕಾ ಏಕಿ ಭೇಟಿ ನೀಡಿದ್ದು ಹಲವು ಅನುಮಾನಗಳು, ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿವೆ. 

ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 16 ಶಾಸಕರ ಅನರ್ಹತೆ ಅರ್ಜಿ ಸುಪ್ರೀಂ ಕೋರ್ಟ್ ಎದುರು ಬಾಕಿ ಇದ್ದು, ಎನ್ ಸಿಪಿಯ 34-53 ಶಾಸಕರು ಅಜಿತ್ ಪವಾರ್ ಬಿಜೆಪಿ ಜೊತೆ ಕೈ ಜೋಡಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT