ಮುಕುಲ್ ರಾಯ್ 
ದೇಶ

ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿರುವ ಮುಕುಲ್ ರಾಯ್ ಗೆ ಪಾರ್ಕಿನ್ಸನ್, ಮರೆವಿವ ರೋಗ ಇದೆ: ವೈದ್ಯರು

ಬಂಗಾಳದಲ್ಲಿ ಬಿಜೆಪಿ- ಟಿಎಂಸಿ ನಡುವೆ ಕಳೆದ ಕೆಲವು ವರ್ಷಗಳಲ್ಲಿ ಪಕ್ಷಾಂತರ ಮಾಡಿದ್ದ ಪ್ರಮುಖ ರಾಜಕಾರಣಿ ಮುಕುಲ್ ರಾಯ್ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕೋಲ್ಕತ್ತ: ಬಂಗಾಳದಲ್ಲಿ ಬಿಜೆಪಿ- ಟಿಎಂಸಿ ನಡುವೆ ಕಳೆದ ಕೆಲವು ವರ್ಷಗಳಲ್ಲಿ ಪಕ್ಷಾಂತರ ಮಾಡಿದ್ದ ಪ್ರಮುಖ ರಾಜಕಾರಣಿ ಮುಕುಲ್ ರಾಯ್ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನರವೈಜ್ಞಾನಿಕ ಅಸ್ವಸ್ಥತೆ ಎದುರಿಸುತ್ತಿದ್ದ ಅವರಿಗೆ ಕಳೆದ ತಿಂಗಳು ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ತಿಳಿಸಿದ್ದಾರೆ.

ದೈಹಿಕವಾಗಿ ಮುಕುಲ್ ರಾಯ್ ಚೇತರಿಸಿಕೊಂಡರೂ, ಅವರ ಮಾನಸಿಕ ಕಾರ್ಯನಿರ್ವಹಣೆಯ ಸುಧಾರಣೆಯ ಬಗ್ಗೆ ವೈದ್ಯರು ಖಚಿತವಾಗಿ ಏನನ್ನೂ ಹೇಳಿಲ್ಲ. ರಾಯ್ ಅವರು ಜಲಮಸ್ತಿಷ್ಕ (ಮೆದುಳಿನಲ್ಲಿ ಒಂದು ರೀತಿಯ ದ್ರವ ತುಂಬಿಕೊಳ್ಳುವ ಸಮಸ್ಯೆ) ರೋಗಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದರು, ಈ ಸ್ಥಿತಿಯು ಮೆದುಳಿನಲ್ಲಿ ದ್ರವವು ಸಂಗ್ರಹಗೊಳ್ಳುತ್ತದೆ, ಇದು ಮೆದುಳಿಗೆ ಹಾನಿಯನ್ನುಂಟುಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಯ್ ಅವರ ದೈಹಿಕ ಸ್ಥಿತಿ ಒಂದು ತಿಂಗಳ ಹಿಂದಿನ ಸ್ಥಿತಿಗಿಂತಲೂ ಈಗ ಸುಧಾರಿಸಿದೆ. ಆದರೆ ಅವರು ಸಂಚರಿಸಲು ದೈಹಿಕವಾಗಿ ಸದೃಢರಾಗಿದ್ದಾರೆ. ಆದರೆ ಡಿಮ್ನಿಷಿಯಾ ಸಮಸ್ಯೆಯನ್ನು ಸಂಪೂರ್ಣವಾಗಿ ಗುಣ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಖ್ಯಾತ ನರಶಸ್ತ್ರಚಿಕಿತ್ಸಕ ಡಾ ಎಸ್ಎನ್  ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?