ಸುಪ್ರೀಂ ಕೋರ್ಟ್ 
ದೇಶ

ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ನೀಡಿ ಗೌರವಯುತ ಜೀವನ ನಡೆಸಲು ಸಹಾಯ ಮಾಡಿ: ಸುಪ್ರೀಂ ಕೋರ್ಟ್ ಗೆ ಅರ್ಜಿದಾರರು

ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ನೀಡಿ, ಭಿನ್ನಲಿಂಗಿಯರಂತೆ ಗೌರವಯುತ ಜೀವನ ನಡೆಸುವುದಕ್ಕೆ ಅವರಿಗೆ ಸಹಾಯ ಮಾಡಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ನವದೆಹಲಿ: ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ನೀಡಿ, ಭಿನ್ನಲಿಂಗಿಯರಂತೆ ಗೌರವಯುತ ಜೀವನ ನಡೆಸುವುದಕ್ಕೆ ಅವರಿಗೆ ಸಹಾಯ ಮಾಡಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.
 
ಸುಪ್ರೀಂ ಕೋರ್ಟ್ ತನ್ನ ಸಂಪೂರ್ಣ ಅಧಿಕಾರವನ್ನು ಬಳಸಿಕೊಂಡು ಎಲ್ ಜಿಬಿಟಿ ಕ್ಲ್ಯುಐಎ ವ್ಯಕ್ತಿಗಳಿಗೆ ಗೌರವಯುತ ಜೀವನ ನಡೆಸುವುದಕ್ಕೆ ಅವಕಾಶ ನೀಡಬೇಕೆಂದು ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ನೀಡಲು ಮನವಿ ಮಾಡಿರುವ ಅರ್ಜಿದಾರರು ಕೇಳಿದ್ದಾರೆ. ಸರ್ಕಾರ ಮುಂದೆ ಬಂದು ಸಲಿಂಗಿಗಳ ವಿವಾಹಕ್ಕೆ ಮಾನ್ಯತೆ ನೀಡಬೇಕೆಂದು ಅರ್ಜಿದಾರರ ಪೈಕಿ ಒಬ್ಬರ ಪರವಾಗಿ ಹಾಜರಾಗಿದ್ದ ಹಿರೊಯ ಅಡ್ವೊಕೇಟ್ ಮುಕುಲ್ ರೋಹಟ್ಗಿ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿದ್ದ ಪಂಚ ಸದಸ್ಯ ಪೀಠಕ್ಕೆ ಹೇಳಿದ್ದಾರೆ.
 
ಈ ವಾದದ ವೇಳೆ ವಿಧವೆಯ ಮರು-ವಿವಾಹದ ಕಾನೂನನ್ನು ಉಲ್ಲೇಖಿಸಿದ ಮುಕುಲ್ ರೋಹಟ್ಗಿ, ಆ ಕಾನೂನನ್ನು ಸಮಾಜವು ಅಂದು ಒಪ್ಪಿಕೊಂಡಿತು ಮತ್ತು "ಕಾನೂನು ನಿಷ್ಠೆಯಿಂದ ವರ್ತಿಸಿತು" ಆ ನಂತರ ಸಮಾಜ ಅದನ್ನು ಸ್ವೀಕರಿಸಿ, ಅನುಸರಿಸಿತು ಎಂದು ಹೇಳಿದರು.

ಇಲ್ಲಿ ಕೋರ್ಟ್ ಸಹ ಸಮಾಜವನ್ನು ಸಲಿಂಗಿಗಳ ವಿವಾಹವನ್ನು ಒಪ್ಪಿಕೊಳ್ಳುವುದಕ್ಕೆ ಮುಂದಡಿ ಇಡುವಂತೆ ಮಾಡಬೇಕು. ಇದಕ್ಕೆ ಕೋರ್ಟ್ ಗೆ ಆರ್ಟಿಕಲ್ 142 ರ ಅಡಿಯಲ್ಲಿ (ಸಂಪೂರ್ಣ ನ್ಯಾಯವನ್ನು ಮಾಡಲು ಅಗತ್ಯವಾದ ಯಾವುದೇ ಆದೇಶವನ್ನು ರವಾನಿಸಲು ಸುಪ್ರೀಂ ಕೋರ್ಟ್ ಗೆ ಸಂಪೂರ್ಣ ಅಧಿಕಾರವನ್ನು ಒದಗಿಸುವ ಸಂವಿಧಾನದ ಅಂಶ) ಅವಕಾಶವಿದ್ದು, ಸಾರ್ವಜನಿಕರಿಂದಲೂ ಬೆಂಬಲ ವ್ಯಕ್ತವಾಗುತ್ತದೆ. 

ನಾವು ನಮ್ಮ ಹಕ್ಕನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನ್ಯಾಯಾಲಯದ ಪ್ರತಿಷ್ಠೆ ಮತ್ತು ನೈತಿಕ ಅಧಿಕಾರವನ್ನು ಅವಲಂಬಿಸಿದ್ದೇವೆ ಎಂದು ರೋಹಟ್ಗಿ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಎಸ್ ಆರ್ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT