ಅಜಿತ್ ಪವಾರ್ 
ದೇಶ

ಬಿಸಿಲಿನ ಝಳಕ್ಕೆ 14 ಮಂದಿ ಸಾವು: ನ್ಯಾಯಾಂಗ ತನಿಖೆಗೆ ಅಜಿತ್ ಪವಾರ್ ಒತ್ತಾಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್...

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ 14 ಮಂದಿ ಸಾವನ್ನಪ್ಪಿದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್ ಗುರುವಾರ ಒತ್ತಾಯಿಸಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು 14 ಜನರ ಸಾವಿನ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಕಂದಾಯ) ನಿತಿನ್ ಕೀರ್ ಅವರ ಏಕಸದಸ್ಯ ಸಮಿತಿ ರಚಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು, ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣವಾಗಿದ್ದು, ಈ ಸಂಬಂಧ "ಮಾನವ ಹತ್ಯೆ" ಪ್ರಕರಣ ದಾಖಲಿಸಬೇಕು ಎಂದು ಪವಾರ್ ಹೇಳಿದ್ದಾರೆ.

ಈ  ಸಂಬಂಧ ರಾಜ್ಯಪಾಲ ರಮೇಶ್ ಬೈಸ್ ಅವರಿಗೆ ಪತ್ರ ಬರೆದಿರುವ ಅಜಿತ್ ಪವಾರ್, ನಿವೃತ್ತ ನ್ಯಾಯಾಧೀಶರಿಂದ ಪ್ರಕರಣ ತನಿಖೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಆರಂಭದಲ್ಲಿ, ಬಿಸಿಲಿನ ತಾಪದಿಂದ 14 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆದರೆ ನಂತರ ಕೆಲವು ವರದಿಗಳು ಏಪ್ರಿಲ್ 16 ರ ಈವೆಂಟ್‌ನಲ್ಲಿ ಕಾಲ್ತುಳಿತದಿಂದ ಸಾವು ಸಂಭವಿಸಿದೆ ಎಂದು ಹೇಳಿರುವುದಾಗಿ ಎಂದು ಎನ್‌ಸಿಪಿ ನಾಯಕ ತಿಳಿಸಿದ್ದಾರೆ.

ಕಳೆದ ಖಾರ್ಘರ್ ಖಾರ್ಘರ್‌ನ 306 ಎಕರೆ ವಿಸ್ತಾರವಾದ ಮೈದಾನದಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ಝಳದಿಂದ ಡಿಹೈಡ್ರೇಶನ್ ಹಾಗೂ ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ 14 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT