ಸಂಗ್ರಹ ಚಿತ್ರ 
ದೇಶ

ಛತ್ತೀಸ್‌ಗಢ: ವಿವಾಹ ಸಮಾರಂಭದಲ್ಲಿ ವ್ಯಕ್ತಿಯಿಂದ ರಾಸಾಯನಿಕ ದಾಳಿ, ವಧು-ವರ ಸೇರಿ 12 ಮಂದಿಗೆ ಗಾಯ

ವಿವಾಹ ಸಮಾರಂಭವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ರೀತಿಯ ವಸ್ತುವಿನಿಂದ ದಾಳಿ ನಡೆಸಿದ್ದು, ಪರಿಣಾಮ ವಧು-ವರ ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಜಗ್ದಲ್‌ಪುರ: ವಿವಾಹ ಸಮಾರಂಭವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ರೀತಿಯ ವಸ್ತುವಿನಿಂದ ದಾಳಿ ನಡೆಸಿದ್ದು, ಪರಿಣಾಮ ವಧು-ವರ ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಭಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟೆ ಅಮಾಬಲ್ ಗ್ರಾಮದಲ್ಲಿ ಬುಧವಾರ ಸಂಜೆ ವಿವಾಹ ಸಮಾರಂಭ ನಡೆಯುತ್ತಿದ್ದು. ಈ ವೇಳೆ ಸ್ಥಳಕ್ಕೆ ಬಂದಿರುವ ವ್ಯಕ್ತಿಯೊಬ್ಬ ಆ್ಯಸಿಡ್ ರೀತಿಯ ವಸ್ತುವಿನಿಂದ ದಾಳಿ ನಡೆಸಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ವರ ದಮರುಧರ್ ಬಾಘೇಲ್ (25), ವಧು ಸುನಿತಾ ಕಹಸ್ಯಪ್ (19) ಮತ್ತು ಇತರ 10 ಮಂದಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ವಧುವಿನ ಮನೆಯಲ್ಲಿ ಮದುವೆ ನಡೆಯುತ್ತಿದ್ದಾಗ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಈ ವೇಳೆ ಎದುರಾತ ಕತ್ತಲೆಯನ್ನೇ ದುರ್ಬಳಕೆಗೆ ಮಾಡಿಕೊಂಡಿರುವ ಆರೋಪಿ, ಮಂಟಪದಲ್ಲಿ ಕುಳಿತಿದ್ದ ವಧು ಮತ್ತು ವರನ ಮೇಲೆ ರಾಸಾಯನಿಕ ವಸ್ತುವಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ವಧು-ವರ ಸೇರಿ ಸುತ್ತ ಕುಳಿತಿದ್ದ ಕುಟುಂಬದ ಸದಸ್ಯರ ಮೇಲೂ ರಾಸಾಯನಿಕ ವಸ್ತು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಾರಾಯಣಪುರ ಕಾಂಗ್ರೆಸ್ ಶಾಸಕ ಚಂದನ್ ಕಶ್ಯಪ್ ಕೂಡ ವಿವಾಹ ಸಮಾರಂಭಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ತಮ್ಮ ಬೆಂಗಾವಲು ಪಡೆಯ ವಾಹನದಲ್ಲಿ ಭಾನ್‌ಪುರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಗಾಯಗೊಂಡ 12 ಜನರಲ್ಲಿ ವಧು, ವರ ಮತ್ತು ಇತರೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಗದಲ್‌ಪುರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ನಡುವೆ ವರ ಬಾಘೆಲ್ ಅವರನ್ನು ಗುರುವಾರ ಬೆಳಿಗ್ಗೆ ಡಿಸ್ಚಾರ್ಜ್ ಮಾಡಲಾಗಿದೆ, ಇತರರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆ ಸಂಬಂಧ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT