ಮಮತಾ-ಸುವೇಂದು 
ದೇಶ

ಸಿಎಂ ಸ್ಥಾನದಿಂದ ಕೆಳಗಿಳಿಸದಿದ್ದರೆ ರಾಜಕೀಯ ನಿವೃತ್ತಿ: ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ ಸವಾಲು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ, ನಿಮ್ಮನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುರುವಾರ ಸವಾಲು ಹಾಕಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ, ನಿಮ್ಮನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುರುವಾರ ಸವಾಲು ಹಾಕಿದ್ದಾರೆ.

ಇಂದು ಪ್ರತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸುವೇಂದು ಅಧಿಕಾರಿ, ನೀವು ನನ್ನನ್ನು ದರೋಡೆಕೋರ ಎಂದು ಕರೆದಿದ್ದೀರಿ. ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದೀರಿ. ಆದರೆ ಸಿಎಂ ಸ್ಥಾನದಿಂದ ನೀವು ಕೆಳಗಿಳಿಯುವುದಕ್ಕೆ ದಿನಗಣೆ ಆರಂಭವಾಗಿದೆ. ಶೀಘ್ರದಲ್ಲೇ ನಿಮ್ಮ ಮಾಜಿ ಸಿಎಂ ಮಾಡದಿದ್ದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಮಮತಾ ಬ್ಯಾನರ್ಜಿ "ಭ್ರಷ್ಟಾಚಾರದ ರಾಣಿ ಜೇನುನೊಣ" ಎಂದು ಆರೋಪಿಸಿದ ಅಧಿಕಾರಿ, ಸಿಎಂ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ "ಅಪರಾಧಿಗಳನ್ನು" ಬೆಂಬಲಿಸುತ್ತಿದ್ದಾರೆ, ಮೂರು ಬಾರಿ ಬಂಗಾಳದ ಸಿಎಂ ಆಗಿರುವ ದೀದಿಯ ಅಕ್ರಮಗಳನ್ನು ನಾನು ಬಹಿರಂಗಪಡಿಸುತ್ತೇನೆ ಎಂದು ಗುಡುಗಿದ್ದಾರೆ.

ಪ್ರಧಾನಿಯವರಿಗೆ ಸಂಬಂಧಿಸಿದಂತೆ ನೀವು ಈ ಹಿಂದೆ ಬಳಸಿದ ರೀತಿಯ ಕೀಳು ಪದಗಳನ್ನು ನನ್ನ ವಿರುದ್ಧವೂ ಬಳಸಿರುವುದು ನಾಚಿಕೆಗೇಡಿನ ಸಂಗತಿ. ನೀವು ದೆಹಲಿಗೆ ಕರೆ ಮಾಡಲು ಸ್ಥಿರ ದೂರವಾಣಿ ಬಳಸಿದ್ದೀರಿ. ಸರಿಯಾದ ಸಮಯದಲ್ಲಿ ದಾಖಲೆ ಸಮೇತ ಮಾಹಿತಿ‌ ಬಹಿರಂಗ ಪಡಿಸುವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT