ಪ್ರಧಾನಿ ಮೋದಿ ಜೊತೆ ಮಾತನಾಡುತ್ತಿರುವ ಕೆಎಸ್ ಈಶ್ವರಪ್ಪ 
ದೇಶ

ಬಿಜೆಪಿ ಭ್ರಷ್ಟಾಚಾರವನ್ನು ಅನುಮೋದಿಸುತ್ತಿದೆ: ಈಶ್ವರಪ್ಪಗೆ ಪ್ರಧಾನಿ ದೂರವಾಣಿ ಕರೆ ಬಗ್ಗೆ ಕಾಂಗ್ರೆಸ್ ಟೀಕೆ

ಶಿವಮೊಗ್ಗದ ಬಿಜೆಪಿ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.

ಬೆಂಗಳೂರು: ಶಿವಮೊಗ್ಗದ ಬಿಜೆಪಿ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.

ಈಶ್ವರಪ್ಪ ಅವರಿಗೆ ಪ್ರಧಾನಿ ಮೋದಿ ಕರೆ ಮಾಡಿದ್ದನ್ನು ಕಾಂಗ್ರೆಸ್ ಭ್ರಷ್ಟಾಚಾರದ ಅನುಮೋದನೆ ಎಂದು ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. ಈಶ್ವರಪ್ಪ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಟಿಕೆಟ್ ನಿರಾಕರಣೆ ಮಾಡಿದ ಬಳಿಕವೂ ಪ್ರತಿಭಟಿಸದೇ ಇರುವುದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿರುವುದು ಒಪ್ಪಲಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
 
ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದ ಕೆಎಸ್ ಈಶ್ವರಪ್ಪ 2022 ರ ಏಪ್ರಿಲ್ ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ, ಬೆಳಗಾವಿಯ ಸಾರ್ವಜನಿಕ ಕಾಮಗಾರಿಗಳಲ್ಲಿ ಈಶ್ವರಪ್ಪ ಶೇ.40 ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದ. ಈ ಪ್ರಕರಣದ ತನಿಖೆಯಲ್ಲಿ ಕೆಎಸ್ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿತ್ತು.

ಈ ಬಳಿಕ ಈಶ್ವರಪ್ಪ ಸ್ವ ಇಚ್ಛೆಯಿಂದ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸುತ್ತಿರುವುದಾಗಿ ಘೋಷಿಸಿದ್ದರು ಆದರೆ ಪುತ್ರ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪಕ್ಷ ಚನ್ನಬಸಪ್ಪ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಿತ್ತು. 

ಈಶ್ವರಪ್ಪ ಅವರಂತಹ ನಾಯಕರನ್ನು ಪ್ರಶಂಸಿಸುವುದರ ಮೂಲಕ ಬಿಜೆಪಿ ತಾನು ಅಕ್ರಮ ಚಟುವಟಿಕೆಗಳನ್ನು ಹಾಗೂ ಭ್ರಷ್ಟಾಚಾರವನ್ನು ಅನುಮೋದಿಸುತ್ತದೆ ಎಂಬ ಸಂದೇಶ ರವಾನೆ ಮಾಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಾಪ್ರಹಾರ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT