ಸಾಂದರ್ಭಿಕ ಚಿತ್ರ 
ದೇಶ

ಅಯೋಧ್ಯೆ ಬಳಿ ಟ್ರಕ್‌ಗೆ ಬಸ್ ಡಿಕ್ಕಿ: 7 ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಅಯೋಧ್ಯೆ: ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಗಾಯಾಳುಗಳನ್ನು ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಯೋಧ್ಯೆಯ ಹೊರವಲಯದ ಅಂಬೇಡ್ಕರ್‌ ನಗರದ ಬಳಿ ತಿರುವಿನಲ್ಲಿ ಖಾಸಗಿ ಬಸ್ ಒಂದು, ವೇಗವಾಗಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆತರುತ್ತಿದ್ದ ಬಸ್ ಎದುರುಗಡೆಯಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ.

ರಸ್ತೆ ಅಪಘಾತದಲ್ಲಿ ಇಲ್ಲಿಯವರೆಗೆ ಏಳು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಬಸ್‌ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

12ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿರುವವರನ್ನು ನಾವು ಸ್ಥಳಾಂತರಿಸುತ್ತಿದ್ದೇವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗುತ್ತಿದೆ" ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT