ಸತ್ಯಪಾಲ್ ಮಲೀಕ್ 
ದೇಶ

ಪ್ರತೀಕಾರಕ್ಕಾಗಿ ಸತ್ಯಪಾಲ್ ಮಲೀಕ್ ಗೆ ಸಿಬಿಐ ಸಮನ್ಸ್: ಕಾಂಗ್ರೆಸ್ ಆರೋಪ 

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲೀಕ್ ಗೆ ಸಿಬಿಐ ಸಮನ್ಸ್ ಜಾರಿಗೊಳಿಸಿರುವುದರ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. 

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲೀಕ್ ಗೆ ಸಿಬಿಐ ಸಮನ್ಸ್ ಜಾರಿಗೊಳಿಸಿರುವುದರ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಸತ್ಯಪಾಲ್ ಮಲೀಕ್ ಹಾಗೂ ಸತ್ಯವನ್ನು ಹೇಳುವ ಇತರರಿಗೆ ಈ ಮೂಲಕ ಮೌನವಾಗಿರುವಂತೆ ಸಂದೇಶ ರವಾನೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಈ ಬಗ್ಗೆ ಮಾತನಾಡಿದ್ದು, ಸತ್ಯಪಾಲ್ ಮಲೀಕ್ ಗೆ ಸಮನ್ಸ್ ನೀಡಿದ್ದು ಅಚ್ಚರಿಯೇನು ಅಲ್ಲ. ಆದರೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಅವರು ಸೂಕ್ತ ಮತ್ತು ಸಂಬಂಧಿತ ಪ್ರಶ್ನೆಗಳನ್ನೆತ್ತಿದ 10 ದಿನಗಳಲ್ಲೇ ಪ್ರತೀಕಾರವಾಗಿ ಸಿಬಿಐ ಸಮನ್ಸ್ ಬಂದಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ. 

10 ದಿನಗಳೇಕೆ ತೆಗೆದುಕೊಂಡರೆಂಬುದು ತಿಳಿಯುತ್ತಿಲ್ಲ. ಸಾಮಾನ್ಯವಾಗಿ ಟೀಕೆಗಳನ್ನು ಮೌನವಾಗಿಸುವ ವಿಷಯದಲ್ಲಿ ಪ್ರಧಾನಿ ಕ್ಷಿಪ್ರವಾಗಿರುತ್ತಾರೆ. ಸತ್ಯಪಾಲ್ ಮಲೀಕ್ ಮಾಡಿದ್ದಾದರೂ ಏನು? ಅವರು ಕೆಲವು ಪ್ರಮುಖ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅತ್ಯಂತ ಸೂಕ್ತವಾದ ಪ್ರಶ್ನೆಗಳನ್ನು ಕೇಳಿದ್ದರು  ಎಂದು ಮಲೀಕ್ ಅವರನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.
 
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ನಡೆದ ವಿಮೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಲೀಕ್ ಅವರನ್ನು ಪ್ರಶ್ನೆಗಳಿಗೆ ಉತ್ತರಿಸುವಂತೆ ಕೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT