ಸಂಗ್ರಹ ಚಿತ್ರ 
ದೇಶ

ಮುಂದಿನ 5 ದಿನ ಭಾರತದಲ್ಲಿ ಉಷ್ಣಹವೆ ಪರಿಸ್ಥಿತಿ ಇರುವುದಿಲ್ಲ: ಹವಾಮಾನ ಇಲಾಖೆ

ಬೇಸಿಗೆ ಧಗೆಯಲ್ಲಿ ಬೆಂದು ಹೋಗಿರುವ ಜನಕ್ಕೆ ಕೇಂದ್ರ ಹವಾಮಾನ ಇಲಾಖೆ ಕೊಂಚ ಸಮಾಧಾನದ ಮಾಹಿತಿ ನೀಡಿದ್ದು, ಮುಂದಿನ 5 ದಿನ ಭಾರತದಲ್ಲಿ ಉಷ್ಣಹವೆ ಪರಿಸ್ಥಿತಿ ಇರುವುದಿಲ್ಲ ಎಂದು ಹೇಳಿದೆ.

ನವದೆಹಲಿ: ಬೇಸಿಗೆ ಧಗೆಯಲ್ಲಿ ಬೆಂದು ಹೋಗಿರುವ ಜನಕ್ಕೆ ಕೇಂದ್ರ ಹವಾಮಾನ ಇಲಾಖೆ ಕೊಂಚ ಸಮಾಧಾನದ ಮಾಹಿತಿ ನೀಡಿದ್ದು, ಮುಂದಿನ 5 ದಿನ ಭಾರತದಲ್ಲಿ ಉಷ್ಣಹವೆ ಪರಿಸ್ಥಿತಿ ಇರುವುದಿಲ್ಲ ಎಂದು ಹೇಳಿದೆ.

ಈ ವಾರ ಜನರನ್ನು ಬೆಚ್ಚಿಬೀಳಿಸಿದ್ದ ಬಿಸಿಗಾಳಿ ಅಥವಾ ಉಷ್ಣಹವೆ ಪರಿಸ್ಥಿತಿಯಿಂದ ಮುಂದಿನ ಐದು ದಿನಗಳ ಕಾಲ ಭಾರತದ ಬಹುತೇಕ ಭಾಗಗಳು ನೆಮ್ಮದಿಯ ನಿಟ್ಟುಸಿರು ಬಿಡಲಿವೆ. ಈ ಬಗ್ಗೆ ಸ್ವತಃ ಭಾರತೀಯ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು, 'ವಾಯುವ್ಯ ಮಧ್ಯಪ್ರದೇಶದ ಮೇಲೆ ಒಂದು ಟ್ರಫ್  (ಚಂಡಮಾರುತ ಎಂದೂ ಕರೆಯಲ್ಪಡುವ ಇದು ಕಡಿಮೆ ಒತ್ತಡದ ವ್ಯವಸ್ಥೆ) ಅಥವಾ ಚಂಡಮಾರುತದ ಪರಿಚಲನೆ ಮತ್ತು ಇನ್ನೊಂದು ತಮಿಳುನಾಡಿನ ಒಳಭಾಗದಲ್ಲಿ ಚಲನೆ ಇದ್ದು, ಇದು ಉಷ್ಣಹವೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ ಎಂದು ಹೇಳಿದೆ.

ಟ್ರಫ್ ಪರಿಣಾಮ ತುಲನಾತ್ಮಕವಾಗಿ ಕಡಿಮೆ ಒತ್ತಡದ ಚಂಡಮಾರುತ ವಾಯುವ್ಯ ಮಧ್ಯಪ್ರದೇಶದಿಂದ ತೆಲಂಗಾಣದ ಮೂಲಕ ದಕ್ಷಿಣ ತಮಿಳುನಾಡಿಗೆ ಹಾದು ಹೋಗುತ್ತದೆ. ಖಾಸಗಿ ಮುನ್ಸೂಚಕ ಸ್ಕೈಮೆಟ್ ಹವಾಮಾನ ಸಂಸ್ಥೆಯ ಮಾಹಿತಿ ಅನ್ವಯ ಈಶಾನ್ಯ ಬಿಹಾರದಿಂದ ಜಾರ್ಖಂಡ್ ಮೂಲಕ ಒಡಿಶಾದವರೆಗೆ ಮತ್ತೊಂದು ಟ್ರಫ್ ಅಥವಾ ಚಂಡಮಾರುತವನ್ನು ವಿಸ್ತರಿಸಿದೆ ಎಂದು ಹೇಳಿದೆ.

ಹವಾಮಾನ ತಜ್ಞರು ಹೇಳುವ ಪ್ರಕಾರ ಒಂದು ಟ್ರಫ್ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮತ್ತು ಮಳೆಯನ್ನು ತರುತ್ತದೆ, ಇದು ತಾಪಮಾನದಲ್ಲಿ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: ಹಲವರಿಗೆ ಮುಂಬಡ್ತಿ, ಕೆಲವರಿಗೆ ವರ್ಗಾವಣೆ

ಆದ್ಯತೆಯ ಪಟ್ಟಿಯಲ್ಲಿ ವಿಮೆಗೆ ಹೆಚ್ಚಿನ ಮಹತ್ವವಿರಲಿ! (ಹಣಕ್ಲಾಸು)

New Year 2026: ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ನೂತನ ವರ್ಷವ ಸ್ವಾಗತಿಸೋಣ; ಜನತೆಗೆ ಶುಭಾಶಯ ಕೋರಿದ CM-DCM

ನನ್ನ ದೇಹ ಚರ್ಚೆಯ ವಿಷಯವಲ್ಲ: ಮಗಳು ಸಾನ್ವಿ ಹೇಳಿಕೆಗೆ ಸುದೀಪ್ ಕೊಟ್ಟ ಉತ್ತರವೇನು?

SCROLL FOR NEXT