ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ 
ದೇಶ

ಬಾಕಿ ಇರುವ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ: ಹೈಕೋರ್ಟ್ ನ್ಯಾಯಾಧೀಶರಿಗೆ ಸಿಜೆಐ ತರಾಟೆ

ಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ.

ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರೊಬ್ಬರು ಬಾಕಿ ಇರುವ ಪ್ರಕರಣಗಳ ಬಗ್ಗೆ ಮಾಧ್ಯಮಗಳಿಗೆ ಸಂದರ್ಶನ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ಗರಂ ಆಗಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರು ಬಾಕಿ ಇರುವ ಪ್ರಕರಣವೊಂದರ ಬಗ್ಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. 

ಬಾಕಿ ಇರುವ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರು ಸಂದರ್ಶನ ನೀಡಬೇಕಿಲ್ಲ. ಅದು ನಿಜವಾದರೆ, ಈ ಪ್ರಕರಣವನ್ನು ಅವರು ವಿಚಾರಣೆ ನಡೆಸಬೇಕಿಲ್ಲ. ಅವರು ಈ ರೀತಿ ಮಾಡಿದ್ದರೆ, ವಿಚಾರಣೆಯಲ್ಲಿ ಭಾಗವಹಿಸಬೇಕಿಲ್ಲ.

ಬಾಕಿ ಉಳಿದಿರುವ ವಿಷಯಗಳ ಕುರಿತು ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುವುದು ನ್ಯಾಯಾಧೀಶರ ಕೆಲಸವಲ್ಲ. ಇದು ನಿಜವಾಗಿದ್ದರೆ, ಅವರು ಇನ್ನು ಮುಂದೆ ಈ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ನಾವು ತನಿಖೆಯನ್ನು ಮಾಡುವುದಿಲ್ಲ. ಆದರೆ ಟಿವಿ ಚರ್ಚೆಯಲ್ಲಿ ಅರ್ಜಿದಾರರ ಬಗ್ಗೆ ನ್ಯಾಯಾಧೀಶರು ಅಭಿಪ್ರಾಯವನ್ನು ನೀಡಿದರೆ, ಅವರು ಆ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ. ನಂತರ ಹೈಕೋರ್ಟ್ ಮುಖ್ಯಸ್ಥರು ಹೊಸ ಪೀಠವನ್ನು ರಚಿಸಬೇಕು ಎಂದು ಸಿಜೆಐ ಹೇಳಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧದ ನೇಮಕಾತಿ ಹಗರಣದಲ್ಲಿ  ಅವರ ಪಾತ್ರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಬಿಐ ಗೆ ನಿರ್ದೇಶಿಸುವುದರ ಪ್ರಕರಣದ ಬಗ್ಗೆ ಕೋರ್ಟ್ ಈಗ ಹೆಚ್ಚಿನ ಮಹತ್ವ ನೀಡುವುದಿಲ್ಲ. ಆದರೆ ಹೈಕೋರ್ಟ್ ನ್ಯಾಯಾಧೀಶರು ಸಂದರ್ಶನ ನೀಡಿದ್ದಾರೆಯೇ ಇಲ್ಲವೇ ಎಂಬುದನ್ನು ತಿಳಿಯುವುದು ಅಗತ್ಯವಾಗಿದೆ ಎಂದು ಚಂದ್ರಚೂಡ್ ಹೇಳಿದ್ದಾರೆ. 

ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತಮ್ಮನ್ನು ವಿಚಾರಣೆ ನಡೆಸಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿರುವ ಕೋಲ್ಕತ್ತ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಟಿಎಂ ಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ವೇಳೆ ಸಿಜೆಐ ಈ ಮಾತುಗಳನ್ನಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT