ಉದ್ಧವ್ ಠಾಕ್ರೆ 
ದೇಶ

'ಮಹಾರಾಷ್ಟ್ರದಲ್ಲಿ ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ': ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಭಾನುವಾರ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು ಮತ್ತು ಅದಕ್ಕೆ ನಾವು 'ಸಿದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

ಜಲಗಾಂವ್: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಭಾನುವಾರ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು ಮತ್ತು ಅದಕ್ಕೆ ನಾವು 'ಸಿದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

ಭಾನುವಾರ ಜಲಗಾಂವ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್, 'ಮಹಾರಾಷ್ಟ್ರದಲ್ಲಿ ಚುನಾವಣೆ ಯಾವಾಗ ಬೇಕಾದರೂ ನಡೆಯಬಹುದು ಮತ್ತು ನಾವು ಸನ್ನದ್ಧರಾಗಿದ್ದೇವೆ. ಶಾಸಕರ ಅನರ್ಹತೆ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ ಮತ್ತು ನಾವು ಭರವಸೆ ಹೊಂದಿದ್ದು, ಅಂತಿಮ ತೀರ್ಪು ನಮ್ಮ ಪರವಾಗಿ ಬರುತ್ತದೆ. ಅದರ ನಂತರ, ಯಾವಾಗ ಬೇಕಾದರೂ ಏನು ಬೇಕಾದರೂ ಆಗಬಹುದು' ಎಂದು ಹೇಳಿದರು.

ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ 16 ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಳೆದ ವರ್ಷ ಜೂನ್‌ನಲ್ಲಿ, ಶಿಂಧೆ ಮತ್ತು 39 ಶಾಸಕರು ಶಿವಸೇನೆ ನಾಯಕತ್ವದ ವಿರುದ್ಧ ಬಂಡಾಯವೆದ್ದರು. ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ (ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಳಗೊಂಡ) ಪತನಗೊಂಡಿತು ಮತ್ತು ಶಿವಸೇನೆ ಪಕ್ಷ ವಿಭಜನೆಯಾಯಿತು. 

ಶಿಂಧೆ ನಂತರ ಬಿಜೆಪಿಯೊಂದಿಗೆ ಕೈಜೋಡಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದರು. 2022ರ ಜೂನ್ 30ರಂದು ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಧರ್ಮಕ್ಕೆ ಅನ್ಯಾಯವಾಗಲು ಅವಕಾಶ ನೀಡಿಲ್ಲ ಎಂದು ಉದ್ಧವ್ ಹೇಳಿದ್ದಾರೆ.

'ಇಂದು, ಮಹಾ ವಿಕಾಸ್ ಅಘಾಡಿ ತನ್ನ ಅಸ್ತಿತ್ವದ ಮೂರು ವರ್ಷಗಳನ್ನು ಪೂರೈಸಿದೆ. ಅವರು (ಬಿಜೆಪಿ ಮತ್ತು ಶಿಂಧೆ ಪಾಳಯ) ನಾನು ಹಿಂದುತ್ವವನ್ನು ತ್ಯಜಿಸಿದ್ದೇನೆ ಎಂದು ಆರೋಪಿಸುತ್ತಾರೆ. ಆದರೆ, ಸತ್ಯವೆಂದರೆ ನಾನು ಯಾವುದೇ ಧರ್ಮಕ್ಕೆ ಅನ್ಯಾಯವಾಗುವಂತೆ ನೋಡಿಕೊಂಡಿಲ್ಲ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ಪೂಜಾ ಸ್ಥಳಗಳನ್ನು ಮುಚ್ಚಲಾಗಿದೆ' ಎಂದು ಅವರು ಹೇಳಿದರು.

ಉದ್ಧವ್ ಅವರು ಬಿಜೆಪಿಯ ರಾಜ್ಯ ಘಟಕವು ಏಕನಾಥ್ ಶಿಂಧೆ ನೇತೃತ್ವದಲ್ಲಿ ಮುಂದಿನ ಮಹಾರಾಷ್ಟ್ರ ಚುನಾವಣೆಯನ್ನು ಎದುರಿಸುವುದಾಗಿ ಘೋಷಿಸಿ ಎಂದು ಸವಾಲೆಸೆದರು. 

ಶಿಂಧೆ ಪಾಳಯದ ವಿರುದ್ಧ ವಾಗ್ದಾಳಿ ನಡೆಸಿದ ಉದ್ಧವ್, 'ನಿಮಗೆ ನಿಮ್ಮದೇ ಆದ ಯಾವುದೇ ಆದರ್ಶವಿಲ್ಲ ಮತ್ತು ನಾಯಕರಿಲ್ಲ. ಹೀಗಾಗಿ, ನೀವು ಇತರರ ಆದರ್ಶಗಳನ್ನು ಕದಿಯುವಿರಿ ಮತ್ತು ಯಾರದ್ದೋ ತಂದೆ ಮತ್ತು ತಾಯಿಯ ಹೆಸರನ್ನು ಬಳಸಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಿ. ನಾನು ಈ ಹಿಂದೆಯೂ ಬಿಜೆಪಿಗೆ ಸವಾಲು ಹಾಕಿದ್ದೇನೆ ಮತ್ತು ಮತ್ತೊಮ್ಮೆ ಅದೇ ಸವಾಲನ್ನು ಎಸೆಯುತ್ತೇನೆ. ಮುಂಬರುವ ಚುನಾವಣೆಯಲ್ಲಿ ಅವರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಿ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

SCROLL FOR NEXT