ಜಿ ಸ್ಕ್ವೇರ್ ರಿಯಲ್ಟರ್ಸ್ 
ದೇಶ

ತಮಿಳು ನಾಡು: ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿ

ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳನ್ನು ಒಳಗೊಂಡಿರುವ ಡಿಎಂಕೆ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು  ಬಿಡುಗಡೆ ಮಾಡಿದ ಒಂದು ವಾರದ ನಂತರ ಆದಾಯ ತೆರಿಗೆ ಇಲಾಖೆ ಇಂದು ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್‌ಗೆ 

ಚೆನ್ನೈ: ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳನ್ನು ಒಳಗೊಂಡಿರುವ ಡಿಎಂಕೆ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು  ಬಿಡುಗಡೆ ಮಾಡಿದ ಒಂದು ವಾರದ ನಂತರ ಆದಾಯ ತೆರಿಗೆ ಇಲಾಖೆ ಇಂದು ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸಂಬಂಧಿಸಿ ತಮಿಳು ನಾಡು ಮತ್ತು ಕರ್ನಾಟಕಗಳಲ್ಲಿ ಸುಮಾರು 50 ಸ್ಥಳಗಳಲ್ಲಿ ಶೋಧ ನಡೆಸಿತು.

ಅಣ್ಣಾಮಲೈ ಮಾಡಿದ ಆರೋಪಗಳನ್ನು ಜಿ-ಸ್ಕ್ವೇರ್ ನಿರಾಕರಿಸಿದ್ದು, ಕಂಪನಿಯು 'ಡಿಎಂಕೆಯ ಪಕ್ಷದ ಮೊದಲ ಕುಟುಂಬ'ದ ಮಾಲೀಕತ್ವ ಅಥವಾ ನಿಯಂತ್ರಣದಲ್ಲಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತವಾಗಿವೆ ಎಂದು ಹೇಳಿದ್ದು, ಇದರ ಬೆನ್ನಲ್ಲೇ ದಾಳಿ ನಡೆದಿರುವುದು ವಿಶೇಷ ಮಹತ್ವ ಪಡೆದಿದೆ. 

ಅಣ್ಣಾಮಲೈ ಅವರು ‘ಜಿ ಸ್ಕ್ವೇರ್’ ‘ಡಿಎಂಕೆಯ 1ನೇ ಕುಟುಂಬದ’ ಒಡೆತನದಲ್ಲಿದೆ ಎಂಬ ಆರೋಪಗಳನ್ನು ಮಾಡಿದ್ದರು. ಒಟ್ಟು 38,827.70 ಕೋಟಿ ಆದಾಯವನ್ನು ಹೊಂದಿದ್ದು ಇವೆಲ್ಲವೂ ಭ್ರಷ್ಟಾಚಾರದಿಂದ ಬಂದ ಹಣಗಳಾಗಿವೆ ಎಂದು ಕೂಡ ಟೀಕೆ ಮಾಡಿದ್ದರು. 

ಕಂಪನಿಯ ಆದಾಯವು 38,827.70 ಕೋಟಿ ರೂಪಾಯಿಗಳಾಗಿದ್ದು, ಕಂಪನಿಯು ಎಲ್ಲಾ ಜಮೀನುಗಳನ್ನು ಖರೀದಿಸಿ ಅವುಗಳನ್ನು ಉಳಿಸಿಕೊಂಡಿದೆ ಎಂಬ ತಪ್ಪು ಲೆಕ್ಕಾಚಾರ ನೀಡುತ್ತಿದೆ. ಆನ್‌ಲೈನ್‌ನಲ್ಲಿ ಸುಲಭವಾಗಿ ಲಭ್ಯವಿರುವ ಎನ್‌ಕಂಬರೆನ್ಸ್ ಪ್ರಮಾಣಪತ್ರಗಳ ಮೂಲ ಸಂಶೋಧನೆ ಮತ್ತು ಪರಿಶೀಲನೆ ಮಾಡಿದಾಗ ಕಂಪನಿಯು ವಿವಿಧ ಹಂತಗಳಲ್ಲಿ ಯೋಜನೆಗಳನ್ನು ಅಭಿವೃದ್ಧಿಪಡಿಸಿದೆ ಎಂದು ತೋರಿಸುತ್ತದೆ. ಇಷ್ಟು ವರ್ಷಗಳಲ್ಲಿ ಸುಮಾರು 6,000 ಗ್ರಾಹಕರಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡಿದೆ ಎಂದು ಅಣ್ಣಾಮಲೈ ಅವರ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಜಿ-ಸ್ಕ್ವೇರ್ ಹೇಳಿಕೆ ತಿಳಿಸಿದೆ.

ಜಿ ಸ್ಕ್ವೇರ್, ವಿಶೇಷವಾಗಿ ಕೊಯಮತ್ತೂರಿನ ಮೂರು ಯೋಜನೆಗಳು, ಚೆಂಗಲ್ಪಟ್ಟು ಜಿಲ್ಲೆಯ ಎಗತ್ತೂರ್ ಮತ್ತು ಚೆನ್ನೈನ ನೀಲಂಕಾರೈನಲ್ಲಿ ಕಾರ್ಯಗತಗೊಳಿಸಿದ ಯೋಜನೆಗಳಿಗೆ ಭಾರೀ ವೇಗದಲ್ಲಿ ಅನುಮೋದನೆ ನೀಡುತ್ತಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದರು. ಇದನ್ನು ತಮಿಳುನಾಡು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್ ಮುತ್ತುಸಾಮಿ ಅಲ್ಲಗಳೆದಿದ್ದಾರೆ.

ಜಿ ಸ್ಕ್ವೇರ್ ರಿಯಲ್ಟರ್ಸ್, ಖಾಸಗಿ ಕಂಪನಿಯಾಗಿದ್ದು ಅಕ್ಟೋಬರ್ 12, 2012 ರಂದು ಸಂಘಟಿತವಾಗಿದೆ. ಇದನ್ನು ಸರ್ಕಾರೇತರ ಕಂಪನಿ ಎಂದು ವರ್ಗೀಕರಿಸಲಾಗಿದೆ. ರಿಜಿಸ್ಟ್ರಾರ್ ಆಫ್ ಕಂಪನಿ ಚೆನ್ನೈನಲ್ಲಿ ನೋಂದಾಯಿಸಲಾಗಿದೆ. ಈ ಹಿಂದೆ 2019 ರಲ್ಲಿ ಆದಾಯ ತೆರಿಗೆ ಇಲಾಖೆಯು ಕಂಪನಿಯ ಮೇಲೆ ದಾಳಿ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT