ವರದಕ್ಷಿಣೆ ವಾಪಸ್ ನೀಡಿದ ವರ (ಸಾಂದರ್ಭಿಕ ಚಿತ್ರ) 
ದೇಶ

ಮಧ್ಯ ಪ್ರದೇಶ: ಸಾಮೂಹಿಕ ವಿವಾಹದಲ್ಲಿ ವಧುಗಳಿಗೆ ಪ್ರಗ್ನೆನ್ಸಿ ಟೆಸ್ಟ್, ಹಲವರು ಗರ್ಭಿಣಿಯರು! ವಿವಾದ ಸ್ಫೋಟ, ವ್ಯಾಪಕ ಆಕ್ರೋಶ

ಮಧ್ಯಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಭೋಪಾಲ್: ಮಧ್ಯ ಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಹೌದು.. ಮಧ್ಯಪ್ರದೇಶದ 'ಮುಖ್ಯಮಂತ್ರಿ ಕನ್ಯಾ ವಿವಾಹ' ಯೋಜನೆಯಡಿಯಲ್ಲಿ ವಿವಾಹವಾಗಲು ಆಯ್ಕೆಯಾದ ವಧುಗಳಿಗೆ ಮದುವೆಗೆ ಮುಂಚೆ ಗರ್ಭಧಾರಣೆ ಪರೀಕ್ಷೆ ನಡೆಸಲಾಗಿದೆ ಎಂಬುವುದು ಆ ರಾಜ್ಯದಲ್ಲಿ ವಿವಾದದ ಸ್ವರೂಪ ಪಡೆದಿದೆ. ವಿಶೇಷವೆಂದರೆ ಈ ಯೋಜನೆಯಲ್ಲಿ ಮದುವೆಯಾಗಲು ಬಂದಿದ್ದ ನಾಲ್ವರು ಯುವತಿಯರು ಗರ್ಭಿಣಿಯರಾಗಿದ್ದು ತಿಳಿದು ಬಂದಿದೆ.

ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ 220 ಬಾಲಕಿಯರ ಸಾಮೂಹಿಕ ವಿವಾಹವನ್ನು ಶನಿವಾರ ದಿಂಡೋರಿ ಜಿಲ್ಲೆಯ ಗಡ್ಸರಾಯ್ ಪ್ರದೇಶದಲ್ಲಿ ಆಯೋಜಿಸಲಾಗಿತ್ತು. ಗರ್ಭಧಾರಣೆ ಪರೀಕ್ಷೆ ಅಂಗವಾಗಿ ಮೂತ್ರ ಪರೀಕ್ಷೆಯ ಫಲಿತಾಂಶದ ಪ್ರಕಾರ ಐದು ಹೆಣ್ಣುಮಕ್ಕಳು ಗರ್ಭಿಣಿಯಾಗಿರುವುದರಿಂದ ಅವರ ವಿವಾಹವನ್ನು ನೆರವೇರಿಸಲಾಗಿಲ್ಲ ಎಂದು ತಿಳಿದುಬಂದಿದೆ. ಇದೀಗ ಮದುವೆಯಾಗದ ಯುವತಿಯರು ಇದೀಗ ಕಾರ್ಯಕ್ರಮ ಆಯೋಜಕರ ವಿರುದ್ಧ ತಿರುಗಿಬಿದ್ದಿದ್ದಾರೆ.

‘ನಾನು ಮದುವೆಗೆ ಎಲ್ಲ ರೀತಿಯ ತಯಾರಿ ನಡೆಸಿದ್ದೆ. ಆದರೆ, ಪಟ್ಟಿಯಲ್ಲಿ ನನ್ನ ಹೆಸರೇ ಇರಲಿಲ್ಲ. ನಾನು ಮದುವೆಯಾಗುವ ವ್ಯಕ್ತಿಯೊಡನೆ ವಾಸಿಸುತ್ತಿದ್ದೇನೆ. ವೈದ್ಯಕೀಯ ಪರೀಕ್ಷೆ ವೇಳೆ ನಾನು ಗರ್ಭಿಣಿಯಾಗಿರುವುದು ಕಂಡು ಬಂದಿದೆ. ಇದೇ ಕಾರಣಕ್ಕೆ ನನ್ನ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ‘ ಎಂದು ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ ಆಯ್ಕೆಯಾಗಿ ಕೊನೆಗೆ ತಿರಸ್ಕೃತರಾದ ವಧುವೊಬ್ಬರು ಹೇಳಿದ್ದಾರೆ.

ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಪ್ರಯೋಜನವಾಗುವಂತೆ ಈ ಯೋಜನೆಯನ್ನು ತಂದಿದ್ದು, ಸಾಮೂಹಿಕ ವಿವಾಹವಾದ ದಂಪತಿಗಳಿಗೆ ನಗದು ಮತ್ತು ಗೃಹಬಳಕೆಯ ವಸ್ತುಗಳನ್ನು ನೀಡಲಾಗುತ್ತದೆ. ಇದೇ ಕಾರಣಕ್ಕಾಗಿ ನೂರಾರು ಕನ್ಯೆಯರು ವಿವಾಹ ನೋಂದಣಿ ಮಾಡಿಸಿದ್ದು, ಇದೀಗ ಈ ಕಾರ್ಯಕ್ರಮ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT