ವರದಕ್ಷಿಣೆ ವಾಪಸ್ ನೀಡಿದ ವರ (ಸಾಂದರ್ಭಿಕ ಚಿತ್ರ) 
ದೇಶ

ಮಧ್ಯ ಪ್ರದೇಶ: ಸಾಮೂಹಿಕ ವಿವಾಹದಲ್ಲಿ ವಧುಗಳಿಗೆ ಪ್ರಗ್ನೆನ್ಸಿ ಟೆಸ್ಟ್, ಹಲವರು ಗರ್ಭಿಣಿಯರು! ವಿವಾದ ಸ್ಫೋಟ, ವ್ಯಾಪಕ ಆಕ್ರೋಶ

ಮಧ್ಯಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಭೋಪಾಲ್: ಮಧ್ಯ ಪ್ರದೇಶದ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾರಿ ವಿವಾದ ಸೃಷ್ಟಿ ಮಾಡಿದ್ದು, ಕಾರ್ಯಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಹೌದು.. ಮಧ್ಯಪ್ರದೇಶದ 'ಮುಖ್ಯಮಂತ್ರಿ ಕನ್ಯಾ ವಿವಾಹ' ಯೋಜನೆಯಡಿಯಲ್ಲಿ ವಿವಾಹವಾಗಲು ಆಯ್ಕೆಯಾದ ವಧುಗಳಿಗೆ ಮದುವೆಗೆ ಮುಂಚೆ ಗರ್ಭಧಾರಣೆ ಪರೀಕ್ಷೆ ನಡೆಸಲಾಗಿದೆ ಎಂಬುವುದು ಆ ರಾಜ್ಯದಲ್ಲಿ ವಿವಾದದ ಸ್ವರೂಪ ಪಡೆದಿದೆ. ವಿಶೇಷವೆಂದರೆ ಈ ಯೋಜನೆಯಲ್ಲಿ ಮದುವೆಯಾಗಲು ಬಂದಿದ್ದ ನಾಲ್ವರು ಯುವತಿಯರು ಗರ್ಭಿಣಿಯರಾಗಿದ್ದು ತಿಳಿದು ಬಂದಿದೆ.

ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ 220 ಬಾಲಕಿಯರ ಸಾಮೂಹಿಕ ವಿವಾಹವನ್ನು ಶನಿವಾರ ದಿಂಡೋರಿ ಜಿಲ್ಲೆಯ ಗಡ್ಸರಾಯ್ ಪ್ರದೇಶದಲ್ಲಿ ಆಯೋಜಿಸಲಾಗಿತ್ತು. ಗರ್ಭಧಾರಣೆ ಪರೀಕ್ಷೆ ಅಂಗವಾಗಿ ಮೂತ್ರ ಪರೀಕ್ಷೆಯ ಫಲಿತಾಂಶದ ಪ್ರಕಾರ ಐದು ಹೆಣ್ಣುಮಕ್ಕಳು ಗರ್ಭಿಣಿಯಾಗಿರುವುದರಿಂದ ಅವರ ವಿವಾಹವನ್ನು ನೆರವೇರಿಸಲಾಗಿಲ್ಲ ಎಂದು ತಿಳಿದುಬಂದಿದೆ. ಇದೀಗ ಮದುವೆಯಾಗದ ಯುವತಿಯರು ಇದೀಗ ಕಾರ್ಯಕ್ರಮ ಆಯೋಜಕರ ವಿರುದ್ಧ ತಿರುಗಿಬಿದ್ದಿದ್ದಾರೆ.

‘ನಾನು ಮದುವೆಗೆ ಎಲ್ಲ ರೀತಿಯ ತಯಾರಿ ನಡೆಸಿದ್ದೆ. ಆದರೆ, ಪಟ್ಟಿಯಲ್ಲಿ ನನ್ನ ಹೆಸರೇ ಇರಲಿಲ್ಲ. ನಾನು ಮದುವೆಯಾಗುವ ವ್ಯಕ್ತಿಯೊಡನೆ ವಾಸಿಸುತ್ತಿದ್ದೇನೆ. ವೈದ್ಯಕೀಯ ಪರೀಕ್ಷೆ ವೇಳೆ ನಾನು ಗರ್ಭಿಣಿಯಾಗಿರುವುದು ಕಂಡು ಬಂದಿದೆ. ಇದೇ ಕಾರಣಕ್ಕೆ ನನ್ನ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ‘ ಎಂದು ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ ಆಯ್ಕೆಯಾಗಿ ಕೊನೆಗೆ ತಿರಸ್ಕೃತರಾದ ವಧುವೊಬ್ಬರು ಹೇಳಿದ್ದಾರೆ.

ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಪ್ರಯೋಜನವಾಗುವಂತೆ ಈ ಯೋಜನೆಯನ್ನು ತಂದಿದ್ದು, ಸಾಮೂಹಿಕ ವಿವಾಹವಾದ ದಂಪತಿಗಳಿಗೆ ನಗದು ಮತ್ತು ಗೃಹಬಳಕೆಯ ವಸ್ತುಗಳನ್ನು ನೀಡಲಾಗುತ್ತದೆ. ಇದೇ ಕಾರಣಕ್ಕಾಗಿ ನೂರಾರು ಕನ್ಯೆಯರು ವಿವಾಹ ನೋಂದಣಿ ಮಾಡಿಸಿದ್ದು, ಇದೀಗ ಈ ಕಾರ್ಯಕ್ರಮ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT