ಸಾಂದರ್ಭಿಕ ಚಿತ್ರ 
ದೇಶ

ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರನ ಮೇಲೆ ಆಸಿಡ್ ಎಸೆದ ಮಹಿಳೆ!

ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರ ಮೇಲೆ 22 ವರ್ಷದ ಯುವತಿಯೊಬ್ಬಳು ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ.  

ಅಗ್ದಲ್‌ಪುರ: ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರ ಮೇಲೆ 22 ವರ್ಷದ ಯುವತಿಯೊಬ್ಬಳು ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ.  

ಛೋಟೆ ಅಮಾಬಲ್ ಗ್ರಾಮದಲ್ಲಿಏಪ್ರಿಲ್ 19 ರಂದು  ವರ ದಮೃಧರ್ ಬಘೇಲ್ (25) 19 ವರ್ಷದ ಯುವತಿಯೊಂದಿಗೆ ವಿವಾಹವಾಗುತ್ತಿದ್ದಾಗ ಈ ಘಟನೆ ನಡೆದಿದೆ. ಆಸಿಡ್ ದಾಳಿಯಿಂದ ವಧು ಹಾಗೂ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.  

ಪೊಲೀಸರು ಅಪರಿಚಿತ ಆರೋಪಿ ವಿರುದ್ಧ ಐಪಿಸಿ (ಐಪಿಸಿ) ಸೆಕ್ಷನ್ 326 ಎ (ಸ್ವಯಂಪ್ರೇರಿತವಾಗಿ ಆಸಿಡ್ ಬಳಕೆಯಿಂದ ಗಂಭೀರವಾದ ಗಾಯವನ್ನುಂಟುಮಾಡುವುದು ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಸಂಜೆ ವೇಳೆಯಲ್ಲಿ ವಿದ್ಯುತ್ ಇಲ್ಲದ ಸಮಯದಲ್ಲಿ ಘಟನೆ ಸಂಭವಿಸಿದ್ದರಿಂದ ಜನರು ಆರೋಪಿಯನ್ನು ನೋಡಲಿಕ್ಕೆ ಸಾಧ್ಯವಾಗಿರಲಿಲ್ಲ. ವರನ ಮಾಜಿ ಪ್ರೇಮಿ ಆಸಿಡ್ ದಾಳಿ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದ ನಂತರ ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಾಲ್ ಮಾಹಿತಿ ನೀಡಿದರು. 

ಅನೇಕ ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದ ಬಘೇಲ್,  ತನಗೆ ಮೋಸ ಮಾಡಿ, ಬೇರೊಂದು ಯುವತಿ ಜೊತೆಗೆ ವಿವಾಹವಾಗುತ್ತಿದ್ದರಿಂದ ಮೆಣಸಿನಕಾಯಿ ತೋಟದಿಂದ ಆಸಿಡ್ ಕದ್ದು ಈ ಕೃತ್ಯವೆಸಗಿರುವುದಾಗಿ ಯುವತಿ ವಿಚಾರಣೆ ವೇಳೆ ಪೊಲೀಸರಿಗೆ ಹೇಳಿದ್ದಾಳೆ. ಅಲ್ಲದೇ, ತನ್ನ ಗುರುತು ಮರೆಮಾಚಲು ಪುರುಷರಂತೆ ವೇಷ ಧರಿಸಿದ್ದಾಗಿಯೂ ಆಕೆ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT