ಪ್ರಕಾಶ್ ಸಿಂಗ್ ಬಾದಲ್ 
ದೇಶ

ಪ್ರಕಾಶ್‌ ಸಿಂಗ್‌ ಬಾದಲ್‌ ನಿಧನ: 2 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರ್ಕಾರ!

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್‌ ಸಿಂಗ್‌ ಬಾದಲ್‌ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.

ಅಮೃತಸರ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್‌ ಸಿಂಗ್‌ ಬಾದಲ್‌ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.

ಕೆಲ ದಿನಗಳಿಂಗ ಅನಾರೋಗ್ಯದಿಂದ ಬಳಲುತ್ತಿದ್ದ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. 

ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರ ಗೌರವಾರ್ಥವಾಗಿ ಗೃಹ ವ್ಯವಹಾರಗಳ ಸಚಿವಾಲಯವು ಏಪ್ರಿಲ್ 26 ಮತ್ತು 27 ರಂದು ಭಾರತದಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ವೇಳೆ ರಾಷ್ಟ್ರ ಧ್ವಜ ಅರ್ಧ ಮಟ್ಟದಲ್ಲಿ ಹಾರಾಡಲಿದ್ದು, ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಗೌರವ ಸೂಚಕವಾಗಿ ಎರಡು ದಿನಗಳ ರಾಜ್ಯ ಶೋಕಾಚರಣೆಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲಾಗುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ. 

ತಮ್ಮ 94 ನೇ ವಯಸ್ಸಿನಲ್ಲಿ, ಬಾದಲ್ ಅವರು 13 ನೇ ಬಾರಿಗೆ ಚುನಾವಣೆ ಸ್ಪರ್ಧಿಸಿದಾಗ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿದ ದೇಶದ ಅತ್ಯಂತ ಹಿರಿಯ ಅಭ್ಯರ್ಥಿ ಎಂಬ ಕೀರ್ತಿಗೆ ಭಾಜನರಾಗಿದ್ದರು. ಆದರೆ ಮುಕ್ತಸರ್ ಜಿಲ್ಲೆಯ ಲಂಬಿಯಲ್ಲಿ ಅವರ ಗೆಲುವು ಸಾಧ್ಯವಾಗಲಿಲ್ಲ. ಅವರು ಸ್ಪರ್ಧಿಸಿದ 7 ಚುನಾವಣೆಗಳಲ್ಲಿ 5ರಲ್ಲಿ ಗೆದ್ದಿದ್ದು, 2 ಬಾರಿ ಸೋತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT