ಪೂಂಚ್ ನಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ 
ದೇಶ

ಪೂಂಚ್ ದಾಳಿ: ಸೇನಾ ವಾಹನದ ಮೇಲೆ 50 ಬುಲೆಟ್ ಗುರುತು ಪತ್ತೆ

ಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. 

ಶ್ರೀನಗರ: ಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ಹೆಡೆಮುರಿಕಟ್ಟಲು ಭಟ ಧುರಿಯನ್-ತೋಟ ಗಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಬೃಹತ್ ಶೋಧಕರ್ಯಾಚರಣೆ ನಡೆದಿದೆ.

ವಿಶೇಷ ಪಡೆಗಳು ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಕೂಡ ದಟ್ಟ ಅರಣ್ಯ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ, ಡ್ರೋನ್‌ಗಳು, ಸ್ನಿಫರ್ ಡಾಗ್‌ಗಳು ಮತ್ತು ಮೆಟಲ್ ಡಿಟೆಕ್ಟರ್‌ಗಳನ್ನು ಈ ಕಾರ್ಯಾಚರಣೆಯಲ್ಲಿ ಬಳಸಲಾಗುತ್ತಿದೆ.

ದಾಳಿಗೆ ಸಂಬಂಧಿಸಿದಂತೆ 14 (ಓವರ್ ಗ್ರೌಂಡ್ ವರ್ಕರ್ ಗಳು) ಸೇರಿದಂತೆ ಸುಮಾರು 50 ಜನರನ್ನು ಬಂಧಿಸಲಾಗಿದೆ ಮತ್ತು ಅವರಲ್ಲಿ ಕೆಲವರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

7-8 ಭಯೋತ್ಪಾದಕರ ಎರಡು ಗುಂಪು ಈ ದಾಳಿಯನ್ನು ರೂಪಿಸಿದೆ ಎಂದು ನಂಬಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯ ಪ್ರಕಾರ, ಭಯೋತ್ಪಾದಕರು ವಾಹನದ ಮೇಲೆ ದಾಳಿ ಮಾಡುವ ಮೊದಲು ಈ ರಸ್ತೆಯ ಕಲ್ವರ್ಟ್‌ನಲ್ಲಿ ಅಡಗಿಕೊಂಡಿದ್ದರು ಎಂದು ವರದಿಯಾಗಿದೆ. ದಾಳಿಗೆ ಗುರಿಯಾದ ವಾಹನದಲ್ಲಿ 50 ಕ್ಕೂ ಹೆಚ್ಚು ಗುಂಡಿನ ಗುರುತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಈ ಪ್ರದೇಶದಲ್ಲಿ ಕೆಲವು ನೈಸರ್ಗಿಕ ಗುಹೆಗಳಲ್ಲಿ ಅಡಗುತಾಣಗಳನ್ನು ಸೇನಾ ಪಡೆಗಳು ಪತ್ತೆ ಮಾಡಿವೆ, ಇದನ್ನು ಈ ಹಿಂದೆ ಭಯೋತ್ಪಾದಕರು ಬಳಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT