ಕಾಂಗ್ರೆಸ್ 
ದೇಶ

ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದಲ್ಲಿ ಐವರು ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ ಐವರು ವೀಕ್ಷಕರನ್ನು ನೇಮಿಸಿದ್ದು, ಪ್ರತಿಯೊಬ್ಬರೂ ರಾಜ್ಯದ ಒಂದೊಂದು ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ ಐವರು ಪ್ರಾದೇಶಿಕ ವೀಕ್ಷಕರನ್ನು ನೇಮಿಸಿದ್ದು, ಪ್ರತಿಯೊಬ್ಬರೂ ರಾಜ್ಯದ ಒಂದೊಂದು ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಮಧ್ಯ ಕರ್ನಾಟಕ ಪ್ರದೇಶಕ್ಕೆ ವೀಕ್ಷಕರಾಗಿ, ಎ ಚೆಲ್ಲಕುಮಾರ್ ಮೈಸೂರು ಪ್ರದೇಶಕ್ಕೆ ಮತ್ತು ಮಾಣಿಕಂ ಟ್ಯಾಗೋರ್ ಮುಂಬೈ-ಕರ್ನಾಟಕ ಪ್ರದೇಶಕ್ಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಕ್ಷದ ನಾಯಕ ಅಜೋಯ್ ಕುಮಾರ್ ಅವರನ್ನು ಕರಾವಳಿ ಕರ್ನಾಟಕ ಪ್ರದೇಶಕ್ಕೆ ಪ್ರಾದೇಶಿಕ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಮೋಹನ್ ಪ್ರಕಾಶ್ ಅವರು ರಾಜ್ಯದ ಉತ್ತರ ಭಾಗದಲ್ಲಿರುವ ಹೈದರಾಬಾದ್-ಕರ್ನಾಟಕ ಪ್ರದೇಶವನ್ನು ನೋಡಿಕೊಳ್ಳಲಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ಏಕೈಕ ದಕ್ಷಿಣ ರಾಜ್ಯವಾದ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ