ದೆಹಲಿ ಮೇಯರ್ ಆಗಿ ಶೆಲ್ಲಿ ಒಬೆರಾಯ್ ಆಯ್ಕೆ 
ದೇಶ

ಬಿಜೆಪಿ ಅಭ್ಯರ್ಥಿ ನಾಮಪತ್ರ ವಾಪಸ್: ದೆಹಲಿ ಮೇಯರ್‌ ಆಗಿ ಎಎಪಿಯ ಶೆಲ್ಲಿ ಒಬೆರಾಯ್‌ ಅವಿರೋಧ ಆಯ್ಕೆ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆ ಆಮ್‌ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ದೆಹಲಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಎರಡನೇ ಅವಧಿಗೂ ಮೇಯರ್ ಆಗಿ ಮುಂದುವರಿದ್ದಾರೆ.

‘ಸ್ಥಾಯಿ ಸಮಿತಿಗೆ ಚುನಾವಣೆ ನಡೆಯದ ಕಾರಣ ನಾಮಪತ್ರ ಹಿಂಪಡೆದುಕೊಂಡಿದ್ದೇನೆ‘ ಎಂದು ಶಿಖಾ ರೈ ಹೇಳಿದ್ದಾರೆ. ಶಿಖಾ ರೈ ಜೊತೆಗೆ ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಲು ಅಣಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸೋನಿ ಪಾಲ್‌ ಕೂಡ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಸೋನಿ ಪಾಲ್ ನಾಮಪತ್ರವನ್ನು ಹಿಂಪಡೆದ ಹಿನ್ನೆಲೆ ಹಾಲಿ ಉಪಮೇಯರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಮತ್ತೊಂದು ಅವಧಿಗೆ ಉಪ ಮೇಯರ್‌ ಆಗಿ ಮುಂದುವರೆದಿದ್ದಾರೆ.

ಎಎಪಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ನಲ್ಲಿ ಆಡಳಿತ ಪಕ್ಷವಾಗಿದೆ. ಹಾಲಿ ಮೇಯರ್‌ ಆಗಿರುವ ಶೆಲ್ಲಿ ಒಬೆರಾಯ್ ಮತ್ತು ಶಿಖಾ ರೈ ನಡುವೆ ಮೇಯರ್‌ ಸ್ಥಾನಕ್ಕೆ ನೇರ ಹಣಾಹಣಿ ಏರ್ಪಟ್ಟಿತ್ತು. ನಾಮಪತ್ರ ಹಿಂತೆಗೆಯುವುದರ ಮೂಲಕ ಸ್ಪರ್ಧೆ ಇಲ್ಲದೇ ಶೆಲ್ಲಿ ಒಬೆರಾಯ್‌ ಮೇಯರ್‌ ಆಯ್ಕೆಯಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿತ್ತು. ಎಎಪಿ ಅಭ್ಯರ್ಥಿ ಶೈಲಿ ಒಬೆರಾಯ್ ಮೇಯರ್ ಮತ್ತು ಮೊಹಮ್ಮದ್ ಇಕ್ಬಾಲ್ ಉಪಮೇಯರ್ ಆಗಿ ಆಯ್ಕೆಯಾದರು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಶೈಲಿ ಒಬೆರಾಯ್ ಅವರು ಫೆಬ್ರವರಿ 22 ರಂದು ದೆಹಲಿಯ ಮೇಯರ್ ಆಗಿ ಆಯ್ಕೆಯಾದರು. ಅವರು ಭಾರತೀಯ ಜನತಾ ಪಕ್ಷದ ರೇಖಾ ಗುಪ್ತಾ ಅವರನ್ನು 34 ಮತಗಳ ಅಂತರದಿಂದ ಸೋಲಿಸಿದರು. ಒಬೆರಾಯ್ ಒಟ್ಟು 266 ಮತಗಳಲ್ಲಿ 150 ಮತಗಳನ್ನು ಪಡೆದರೆ ರೇಖಾ ಗುಪ್ತಾ 116 ಮತಗಳನ್ನು ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT