ದೆಹಲಿ ಮೇಯರ್ ಆಗಿ ಶೆಲ್ಲಿ ಒಬೆರಾಯ್ ಆಯ್ಕೆ 
ದೇಶ

ಬಿಜೆಪಿ ಅಭ್ಯರ್ಥಿ ನಾಮಪತ್ರ ವಾಪಸ್: ದೆಹಲಿ ಮೇಯರ್‌ ಆಗಿ ಎಎಪಿಯ ಶೆಲ್ಲಿ ಒಬೆರಾಯ್‌ ಅವಿರೋಧ ಆಯ್ಕೆ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆ ಆಮ್‌ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ದೆಹಲಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಎರಡನೇ ಅವಧಿಗೂ ಮೇಯರ್ ಆಗಿ ಮುಂದುವರಿದ್ದಾರೆ.

‘ಸ್ಥಾಯಿ ಸಮಿತಿಗೆ ಚುನಾವಣೆ ನಡೆಯದ ಕಾರಣ ನಾಮಪತ್ರ ಹಿಂಪಡೆದುಕೊಂಡಿದ್ದೇನೆ‘ ಎಂದು ಶಿಖಾ ರೈ ಹೇಳಿದ್ದಾರೆ. ಶಿಖಾ ರೈ ಜೊತೆಗೆ ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಲು ಅಣಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸೋನಿ ಪಾಲ್‌ ಕೂಡ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಸೋನಿ ಪಾಲ್ ನಾಮಪತ್ರವನ್ನು ಹಿಂಪಡೆದ ಹಿನ್ನೆಲೆ ಹಾಲಿ ಉಪಮೇಯರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಮತ್ತೊಂದು ಅವಧಿಗೆ ಉಪ ಮೇಯರ್‌ ಆಗಿ ಮುಂದುವರೆದಿದ್ದಾರೆ.

ಎಎಪಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ನಲ್ಲಿ ಆಡಳಿತ ಪಕ್ಷವಾಗಿದೆ. ಹಾಲಿ ಮೇಯರ್‌ ಆಗಿರುವ ಶೆಲ್ಲಿ ಒಬೆರಾಯ್ ಮತ್ತು ಶಿಖಾ ರೈ ನಡುವೆ ಮೇಯರ್‌ ಸ್ಥಾನಕ್ಕೆ ನೇರ ಹಣಾಹಣಿ ಏರ್ಪಟ್ಟಿತ್ತು. ನಾಮಪತ್ರ ಹಿಂತೆಗೆಯುವುದರ ಮೂಲಕ ಸ್ಪರ್ಧೆ ಇಲ್ಲದೇ ಶೆಲ್ಲಿ ಒಬೆರಾಯ್‌ ಮೇಯರ್‌ ಆಯ್ಕೆಯಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿತ್ತು. ಎಎಪಿ ಅಭ್ಯರ್ಥಿ ಶೈಲಿ ಒಬೆರಾಯ್ ಮೇಯರ್ ಮತ್ತು ಮೊಹಮ್ಮದ್ ಇಕ್ಬಾಲ್ ಉಪಮೇಯರ್ ಆಗಿ ಆಯ್ಕೆಯಾದರು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಶೈಲಿ ಒಬೆರಾಯ್ ಅವರು ಫೆಬ್ರವರಿ 22 ರಂದು ದೆಹಲಿಯ ಮೇಯರ್ ಆಗಿ ಆಯ್ಕೆಯಾದರು. ಅವರು ಭಾರತೀಯ ಜನತಾ ಪಕ್ಷದ ರೇಖಾ ಗುಪ್ತಾ ಅವರನ್ನು 34 ಮತಗಳ ಅಂತರದಿಂದ ಸೋಲಿಸಿದರು. ಒಬೆರಾಯ್ ಒಟ್ಟು 266 ಮತಗಳಲ್ಲಿ 150 ಮತಗಳನ್ನು ಪಡೆದರೆ ರೇಖಾ ಗುಪ್ತಾ 116 ಮತಗಳನ್ನು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ