ಅಂಗಡಿ ಮುಂದೆ ಇರಿಸಿದ್ದ ಮಾವಿನಹಣ್ಣಿನ ಬಾಕ್ಸ್ ಕದ್ದೊಯ್ದಿದ್ದ ಪೊಲೀಸ್ ಅಧಿಕಾರಿ 
ದೇಶ

ದುಬಾರಿ ಬೆಲೆಯ ಮಾವಿನ ಹಣ್ಣಿನ ಬಾಕ್ಸ್ ಕದ್ದೊಯ್ದಿದ್ದ ಕೇರಳ ಪೋಲೀಸ್ ಅಧಿಕಾರಿಗೆ ಸಂಕಷ್ಟ, ಸೇವೆಯಿಂದಲೇ ವಜಾ

ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ಕದ್ದೊಯ್ದಿದ್ದಾರೆ ಎಂಬ ಸುದ್ದಿ ಹೊರಬಿದ್ದ ನಂತರ, ಕೇರಳದ ಪೊಲೀಸ್ ಇಲಾಖೆ ಬುಧವಾರ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿದೆ.

ತಿರುವನಂತಪುರಂ: ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ಕದ್ದೊಯ್ದಿದ್ದಾರೆ ಎಂಬ ಸುದ್ದಿ ಹೊರಬಿದ್ದ ನಂತರ, ಕೇರಳದ ಪೊಲೀಸ್ ಇಲಾಖೆ ಬುಧವಾರ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿದೆ.

ಇಡುಕ್ಕಿಯ ಪೊಲೀಸ್ ಅಧೀಕ್ಷಕರು ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪೊಲೀಸ್ ಅಧಿಕಾರಿ ಪಿ.ವಿ. ಶಿಹಾಬ್ ಅವರು ಕೊಟ್ಟಾಯಂ ಜಿಲ್ಲೆಯ ಕಂಜಿರಪಲ್ಲಿಯ ಅಂಗಡಿಯೊಂದರ ಮುಂಭಾಗ ಇರಿಸಲಾಗಿದ್ದ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ಒಯ್ಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆಗ ಕೆಜಿ ಮಾವಿನಹಣ್ಣಿಗೆ 500 ರೂ.ಗೂ ಅಧಿಕ ಬೆಲೆಯಿತ್ತು.

ಬಳಿಕ ಅವರು, ತಮ್ಮ ದ್ವಿಚಕ್ರ ವಾಹನದ ಮೇಲೆ ಬಾಕ್ಸ್ ಇಟ್ಟುಕೊಂಡು ಓಡಿಸುತ್ತಿದ್ದ ದೃಶ್ಯಗಳು ಕಂಡುಬಂದಿದ್ದವು.

ಅಂಗಡಿಯವನು ಮರುದಿನ ತನ್ನ ಅಂಗಡಿಯನ್ನು ತೆರೆಯಲು ಬಂದಾಗ, ಮಾವಿನ ಹಣ್ಣಿನ ಪೆಟ್ಟಿಗೆ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಅವರು ತಮ್ಮ ಸಿಸಿಟಿವಿಯನ್ನು ಪರಿಶೀಲಿಸಿದಾಗ ಪೊಲೀಸರು ಹಣ್ಣನ್ನು ತೆಗೆದುಕೊಂಡು ಹೋಗಿರುವುದನ್ನು ಕಂಡು ಗಾಬರಿಗೊಂಡಿದ್ದರು.

ವಿಡಿಯೋ ವೈರಲ್ ಆದ ನಂತರ, ಇಡುಕ್ಕಿ ಸಶಸ್ತ್ರ ಮೀಸಲು ಶಿಬಿರ ಪೊಲೀಸ್ ಘಟಕಕ್ಕೆ ನಿಯೋಜಿಸಲಾಗಿದ್ದ ಶಿಹಾಬ್ ನಾಪತ್ತೆಯಾಗಿದ್ದರು. 

ಕೂಡಲೇ ಆತನ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯ ನಂತರ ಇಡುಕ್ಕಿ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT