ಸುಡಾನ್ ನಲ್ಲಿ ಸಿಲುಕಿದ್ದ ಭಾರತೀಯರು 
ದೇಶ

ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣ

ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ...

ನವದೆಹಲಿ: ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್‌ನಿಂದ ಹೊರಟಿದೆ.

ಏತನ್ಮಧ್ಯೆ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಸುಡಾನ್ ನಿಂದ ಆಗಮಿಸಿದ 148 ಭಾರತೀಯರ ಎರಡನೇ ಬ್ಯಾಚ್ ಅನ್ನು ಸ್ವಾಗತಿಸಿದರು.

ಇದಕ್ಕೂ ಮುನ್ನ ನೌಕಾಪಡೆಯ ನೌಕೆ ಐಎನ್‌ಎಸ್ ಸುಮೇಧಾ 278 ಭಾರತೀಯರನ್ನು ಜೆಡ್ಡಾ ಬಂದರಿಗೆ ತಲುಪಿಸಿತ್ತು.

"ಆಪರೇಷನ್ ಕಾವೇರಿ ಸಂಪೂರ್ಣ ಸ್ವಿಂಗ್‌ನಲ್ಲಿದೆ. ಐಎಎಫ್ ನ C-130J ಎರಡನೇ ವಿಮಾನವು ಪೋರ್ಟ್ ಸುಡಾನ್‌ನಿಂದ ಜೆಡ್ಡಾಗೆ ಹೊರಡುತ್ತಿದೆ. ಈ ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಆಪರೇಷನ್ ಕಾವೇರಿ ಅಡಿಯಲ್ಲಿ ಸ್ಥಳಾಂತರಿಸಲ್ಪಟ್ಟ ಮೂರನೇ ಬ್ಯಾಚ್ ಆಗಿದೆ" ಎಂದು ಎಂಇಎ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT