ಸುಡಾನ್ ನಲ್ಲಿ ಸಿಲುಕಿದ್ದ ಭಾರತೀಯರು 
ದೇಶ

ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣ

ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ...

ನವದೆಹಲಿ: ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್‌ನಿಂದ ಹೊರಟಿದೆ.

ಏತನ್ಮಧ್ಯೆ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಸುಡಾನ್ ನಿಂದ ಆಗಮಿಸಿದ 148 ಭಾರತೀಯರ ಎರಡನೇ ಬ್ಯಾಚ್ ಅನ್ನು ಸ್ವಾಗತಿಸಿದರು.

ಇದಕ್ಕೂ ಮುನ್ನ ನೌಕಾಪಡೆಯ ನೌಕೆ ಐಎನ್‌ಎಸ್ ಸುಮೇಧಾ 278 ಭಾರತೀಯರನ್ನು ಜೆಡ್ಡಾ ಬಂದರಿಗೆ ತಲುಪಿಸಿತ್ತು.

"ಆಪರೇಷನ್ ಕಾವೇರಿ ಸಂಪೂರ್ಣ ಸ್ವಿಂಗ್‌ನಲ್ಲಿದೆ. ಐಎಎಫ್ ನ C-130J ಎರಡನೇ ವಿಮಾನವು ಪೋರ್ಟ್ ಸುಡಾನ್‌ನಿಂದ ಜೆಡ್ಡಾಗೆ ಹೊರಡುತ್ತಿದೆ. ಈ ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಆಪರೇಷನ್ ಕಾವೇರಿ ಅಡಿಯಲ್ಲಿ ಸ್ಥಳಾಂತರಿಸಲ್ಪಟ್ಟ ಮೂರನೇ ಬ್ಯಾಚ್ ಆಗಿದೆ" ಎಂದು ಎಂಇಎ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video