ಸುಡಾನ್ ನಲ್ಲಿ ಸಿಲುಕಿದ್ದ ಭಾರತೀಯರು 
ದೇಶ

ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣ

ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ...

ನವದೆಹಲಿ: ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್‌ನಿಂದ ಹೊರಟಿದೆ.

ಏತನ್ಮಧ್ಯೆ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಸುಡಾನ್ ನಿಂದ ಆಗಮಿಸಿದ 148 ಭಾರತೀಯರ ಎರಡನೇ ಬ್ಯಾಚ್ ಅನ್ನು ಸ್ವಾಗತಿಸಿದರು.

ಇದಕ್ಕೂ ಮುನ್ನ ನೌಕಾಪಡೆಯ ನೌಕೆ ಐಎನ್‌ಎಸ್ ಸುಮೇಧಾ 278 ಭಾರತೀಯರನ್ನು ಜೆಡ್ಡಾ ಬಂದರಿಗೆ ತಲುಪಿಸಿತ್ತು.

"ಆಪರೇಷನ್ ಕಾವೇರಿ ಸಂಪೂರ್ಣ ಸ್ವಿಂಗ್‌ನಲ್ಲಿದೆ. ಐಎಎಫ್ ನ C-130J ಎರಡನೇ ವಿಮಾನವು ಪೋರ್ಟ್ ಸುಡಾನ್‌ನಿಂದ ಜೆಡ್ಡಾಗೆ ಹೊರಡುತ್ತಿದೆ. ಈ ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಆಪರೇಷನ್ ಕಾವೇರಿ ಅಡಿಯಲ್ಲಿ ಸ್ಥಳಾಂತರಿಸಲ್ಪಟ್ಟ ಮೂರನೇ ಬ್ಯಾಚ್ ಆಗಿದೆ" ಎಂದು ಎಂಇಎ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT