ಮಾಜಿ ಸಂಸದ ಆನಂದ್ 
ದೇಶ

ಬಿಹಾರ ಜೈಲು ನಿಯಮಗಳಿಗೆ ತಿದ್ದುಪಡಿ ನಂತರ ಮಾಜಿ ಸಂಸದ ಆನಂದ್ ಮೋಹನ್ ಜೈಲಿನಿಂದ ಬಿಡುಗಡೆ

ಐಎಎಸ್ ಅಧಿಕಾರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಅವರು ಗುರುವಾರ ಬೆಳಗ್ಗೆ ಸಹರ್ಸಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪಾಟ್ನಾ: ಐಎಎಸ್ ಅಧಿಕಾರಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಆನಂದ್ ಮೋಹನ್ ಸಿಂಗ್ ಅವರು ಗುರುವಾರ ಬೆಳಗ್ಗೆ ಸಹರ್ಸಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸಿಂಗ್ ಸೇರಿದಂತೆ 27 ಅಪರಾಧಿಗಳನ್ನು ಶೀಘ್ರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಇತ್ತೀಚೆಗೆ ಜೈಲು ನಿಯಮಗಳನ್ನು ತಿದ್ದುಪಡಿ ಮಾಡಿದ್ದು, ಜೈಲು ಶಿಕ್ಷೆ ಪರಿಹಾರ ಆದೇಶದ ಅಡಿಯಲ್ಲಿ ಸಿಂಗ್ ಬಿಡುಗಡೆಗೆ ಅವಕಾಶ ನೀಡಲಾಗಿದೆ.

1994ರಲ್ಲಿ ಮುಜಾಫರ್‌ಪುರದ ದರೋಡೆಕೋರ ಚೋಟಾನ್ ಶುಕ್ಲಾ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಯುವ ಐಎಎಸ್ ಅಧಿಕಾರಿಯಾಗಿದ್ದ ಗೋಪಾಲ್‌ಗಂಜ್ ಕಲೆಕ್ಟರ್ ಜಿ ಕೃಷ್ಣಯ್ಯ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಆನಂದ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಕಳೆದ 15 ವರ್ಷಗಳಿಂದ ಜೈಲಿನಲ್ಲಿರುವ ಆನಂದ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅಕ್ಟೋಬರ್ 2007 ರಲ್ಲಿ ಸ್ಥಳೀಯ ನ್ಯಾಯಾಲಯ ಆನಂದ್ ಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಆನಂದ್ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪಾಟ್ನಾ ಹೈಕೋರ್ಟ್ ಡಿಸೆಂಬರ್ 2008 ರಲ್ಲಿ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿತ್ತು.

ನಿತೀಶ್ ಕುಮಾರ್ ಸರ್ಕಾರ, ಏಪ್ರಿಲ್ 10 ರಂದು, ಬಿಹಾರ ಜೈಲು ಕೈಪಿಡಿ, 2012 ಅನ್ನು ತಿದ್ದುಪಡಿ ಮಾಡಿತು ಮತ್ತು 'ಕರ್ತವ್ಯದಲ್ಲಿರುವ ಸಾರ್ವಜನಿಕ ಸೇವಕರ ಹತ್ಯೆ' ಪ್ರಕರಣದ ಅಪರಾಧಿಗಳಿಗೆ ಅವರ ಜೈಲು ಶಿಕ್ಷೆಯಲ್ಲಿ ವಿನಾಯತಿ ನೀಡಲಾಗುವುದಿಲ್ಲ ಎಂಬ ಷರತ್ತನ್ನು ತೆಗೆದುಹಾಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ