ಪ್ರಿಯಾಂಕಾ ಗಾಂಧಿ 
ದೇಶ

'ಆತ್ಮಹತ್ಯೆ' ತಮಾಷೆಯಲ್ಲ, ದೊಡ್ಡ ದುರಂತ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತರಾಟೆ

ಆತ್ಮಹತ್ಯೆ ನೋಟ್ ಕುರಿತು ಜೋಕ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪ್ರಧಾನಿ ಮತ್ತು ಅವರ ತಮಾಷೆಗೆ ಮನಸಾರೆ ನಗುವವರು ಮಾನಸಿಕ...

ನವದೆಹಲಿ: ಆತ್ಮಹತ್ಯೆ ನೋಟ್ ಕುರಿತು ಜೋಕ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪ್ರಧಾನಿ ಮತ್ತು ಅವರ ತಮಾಷೆಗೆ ಮನಸಾರೆ ನಗುವವರು ಮಾನಸಿಕ ಆರೋಗ್ಯದ ಸಮಸ್ಯೆಗಳ ಬಗ್ಗೆ "ಅಪಹಾಸ್ಯ" ಮಾಡುವ ಬದಲು ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳಬೇಕು ಎಂದು ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು ಬುಧವಾರ ಮಾಧ್ಯಮ ವಾಹಿನಿಯ ಸಮಾವೇಶದಲ್ಲಿ ಮಾತನಾಡುತ್ತಾ, ತಮ್ಮ ಮಗಳ ಆತ್ಮಹತ್ಯೆ ನೋಟ್ ಓದುತ್ತಿರುವ ಪ್ರಾಧ್ಯಾಪಕರೊಬ್ಬರು ಹಲವು ವರ್ಷಗಳ ತನ್ನ ಪ್ರಯತ್ನದ ಹೊರತಾಗಿಯೂ ಕಾಗುಣಿತ ತಪ್ಪಾಗಿದೆ ಎಂದು ಟೀಕಿಸಿದರು ಎಂದು ಹಾಸ್ಯ ಮಾಡಿದ್ದರು.

ಮೋದಿಯವರ ಹಾಸ್ಯದ ವಿಡಿಯೋವನ್ನು ಟ್ಯಾಗ್ ಮಾಡಿರುವ ಪ್ರಿಯಾಂಕಾ ಗಾಂಧಿ, "ಖಿನ್ನತೆ ಮತ್ತು ಆತ್ಮಹತ್ಯೆ, ಇದು ವಿಶೇಷವಾಗಿ ಯುವಕರಲ್ಲಿ ನಗುವ ವಿಷಯವಲ್ಲ. ಎನ್ ಸಿಆರ್ ಬಿ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 2021 ರಲ್ಲಿ 1,64033 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ದುರಂತ, ತಮಾಷೆಯಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಪ್ರಧಾನಿ ಮತ್ತು ಅವರ ಹಾಸ್ಯಕ್ಕೆ ಮನಃಪೂರ್ವಕವಾಗಿ ನಗುವವರು ಮಾನಸಿಕ ಆರೋಗ್ಯ ಸಮಸ್ಯೆಗಳ ಕುರಿತು ಅಸ್ವಸ್ಥ ರೀತಿಯಲ್ಲಿ ಅಪಹಾಸ್ಯ ಮಾಡುವ ಬದಲು ಉತ್ತಮ ಶಿಕ್ಷಣ ಮತ್ತು ಜಾಗೃತಿ ಮೂಡಿಸಬೇಕು" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟ್ವಿಟ್ ಮಾಡಿದ್ದಾರೆ ಮತ್ತು ಪಿಎಂ ಮೋದಿ ಮತ್ತು 'ದಿ ಲೈವ್ ಲವ್ ಲಾಫ್' ಅನ್ನು ಟ್ಯಾಗ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT