ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತನಾಡುತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ. 
ದೇಶ

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ, ಮೋದಿ ವಿರುದ್ಧ ಕಿಡಿ

ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

ದೆಹಲಿಯ ಜಂತರ್ ಮಂತರ್'ಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯವರು ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿ, ಮಾತುಕತೆ ನಡೆಸಿದರು.

ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ  ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ,

ಪ್ರಸ್ತುತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಏನಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಫ್ಐಆರ್'ನ್ನೇಕೆ ಪೊಲೀಸರು ತೋರಿಸುತ್ತಿಲ್ಲ? ಈ ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ನಾವೆಲ್ಲರೂ ಟ್ವೀಟ್ ಮಾಡಿ ಹೆಮ್ಮೆ ಪಡುತ್ತೇವೆ. ಆದರೆ, ಇಂತಹ ಕುಸ್ತಿಪಟುಗಳು ರಸ್ತೆಯಲ್ಲಿ ಕುಳಿತಿದ್ದು, ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದಾರೆ. ಈ ಎಲ್ಲಾ ಮಹಿಳಾ ಕುಸ್ತಿಪಟುಗಳು ಈ ಹಂತಕ್ಕೆ ಬರಲು ಸಾಕಷ್ಟು ಕಷ್ಟಪಡುತ್ತಾರೆ. ಸರ್ಕಾರವು ಸಂಸದನ್ನೇಕೆ (ಬ್ರಿಜ್ ಭೂಷಣ್ ಶರಣ್ ಸಿಂಗ್) ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?