ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತನಾಡುತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ. 
ದೇಶ

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿದ ಪ್ರಿಯಾಂಕಾ ಗಾಂಧಿ, ಮೋದಿ ವಿರುದ್ಧ ಕಿಡಿ

ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.

ದೆಹಲಿಯ ಜಂತರ್ ಮಂತರ್'ಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯವರು ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿ, ಮಾತುಕತೆ ನಡೆಸಿದರು.

ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ  ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ,

ಪ್ರಸ್ತುತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಏನಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಫ್ಐಆರ್'ನ್ನೇಕೆ ಪೊಲೀಸರು ತೋರಿಸುತ್ತಿಲ್ಲ? ಈ ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ನಾವೆಲ್ಲರೂ ಟ್ವೀಟ್ ಮಾಡಿ ಹೆಮ್ಮೆ ಪಡುತ್ತೇವೆ. ಆದರೆ, ಇಂತಹ ಕುಸ್ತಿಪಟುಗಳು ರಸ್ತೆಯಲ್ಲಿ ಕುಳಿತಿದ್ದು, ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದಾರೆ. ಈ ಎಲ್ಲಾ ಮಹಿಳಾ ಕುಸ್ತಿಪಟುಗಳು ಈ ಹಂತಕ್ಕೆ ಬರಲು ಸಾಕಷ್ಟು ಕಷ್ಟಪಡುತ್ತಾರೆ. ಸರ್ಕಾರವು ಸಂಸದನ್ನೇಕೆ (ಬ್ರಿಜ್ ಭೂಷಣ್ ಶರಣ್ ಸಿಂಗ್) ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT