ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ರಜೌರಿ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!

ರಾಜೌರಿಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿದ್ದ ಅಪಘಾತದಲ್ಲಿ ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಯೋಧರು ಗಾಯಗೊಂಡಿದ್ದಾರೆ. 

ರಜೌರಿ(ಜಮ್ಮು ಮತ್ತು ಕಾಶ್ಮೀರ): ರಾಜೌರಿಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿದ್ದ ಅಪಘಾತದಲ್ಲಿ ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಯೋಧರು ಗಾಯಗೊಂಡಿದ್ದಾರೆ. 

ಗಡಿ ರೇಖೆ ಬಳಿ ಕೆರ್ರಿ ಸೆಕ್ಟರ್‌ ಬಳಿ ಅಪಘಾತ ಸಂಭವಿಸಿದೆ. ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಆಳವಾದ ಕಮರಿಗೆ ಬಿದ್ದಿತ್ತು. ಅಪಘಾತದ ಮಾಹಿತಿ ಸಿಕ್ಕ ತಕ್ಷಣ ಸೇನೆ, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸೇನಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಯಂತ್ರಣ ರೇಖೆ ಬಳಿಯ ಡುಂಗಿ ಗಾಲಾ ಬಳಿ ಆಂಬುಲೆನ್ಸ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಆಂಬ್ಯುಲೆನ್ಸ್ ಚಾಲಕ ಮತ್ತು ಜವಾನ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಅವರ ಮೃತದೇಹಗಳನ್ನು ರಕ್ಷಣಾ ಕಾರ್ಯಕರ್ತರು ನಾಲೆಯಿಂದ ಹೊರತೆಗೆದಿದ್ದಾರೆ.

ಕಳೆದ ವರ್ಷವೂ ಇಂತಹದ್ದೇ ಘಟನೆ ನಡೆದಿತ್ತು!
ಕಳೆದ ವರ್ಷ ಡಿಸೆಂಬರ್‌ನಲ್ಲಿ ಉತ್ತರ ಸಿಕ್ಕಿಂ ಬಳಿ ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನವು ಸ್ಕಿಡ್ ಆಗಿ 16 ಸೇನಾ ಸಿಬ್ಬಂದಿ ಸಾವನ್ನಪ್ಪಿದರು. ಅಲ್ಲದೆ ನಾಲ್ವರು ಗಾಯಗೊಂಡಿದ್ದರು. ಈ ವಾಹನವು ಮೂರು ವಾಹನಗಳ ಬೆಂಗಾವಲಿನ ಭಾಗವಾಗಿತ್ತು. ಬೆಳಿಗ್ಗೆ ಚಟಾನ್‌ನಿಂದ ಥಾಂಗು ಕಡೆಗೆ ವಾಹನ ಚಲಿಸುತ್ತಿತ್ತು. ಗೆಮ್ಮಾಗೆ ಹೋಗುವ ದಾರಿಯಲ್ಲಿ ಅಪಘಾತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT