ಮುಖ್ತಾರ್ ಅನ್ಸಾರಿ 
ದೇಶ

ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ

ಅಪಹರಣ, ಕೊಲೆ ಪ್ರಕರಣದಲ್ಲಿ ಘಾಜಿಪುರದ ಎಂಪಿ ಎಂಎಲ್‌ಎ ನ್ಯಾಯಾಲಯವು ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 5 ಲಕ್ಷ ರೂ ದಂಡವನ್ನು ಹಾಕಿದೆ.

ಘಾಜಿಪುರ (ಉತ್ತರಪ್ರದೇಶ): ಅಪಹರಣ, ಕೊಲೆ ಪ್ರಕರಣದಲ್ಲಿ ಘಾಜಿಪುರದ ಎಂಪಿ ಎಂಎಲ್‌ಎ ನ್ಯಾಯಾಲಯವು ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 5 ಲಕ್ಷ ರೂ ದಂಡವನ್ನು ಹಾಕಿದೆ.

ಇದೇ ವೇಳೆ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಮುಖ್ತಾರ್ ಅನ್ಸಾರಿ ಹಿರಿಯ ಸಹೋದರ, ಬಿಎಸ್​​ಪಿ ಸಂಸದ ಅಫ್ಜಲ್ ಅನ್ಸಾರಿಯವರ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಬಿಜೆಪಿ ಶಾಸಕರಾಗಿದ್ದ ಕೃಷ್ಣಾನಂದ ರೈ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ ಮುಖ್ತಾರ್ ಅನ್ಸಾರಿಗೆ ಶಿಕ್ಷೆಯಾಗಿದೆ.

ಕೃಷ್ಣಾನಂದ ರೈ ಅವರು 2002ರಿಂದ 2005ರವರೆಗೆ ಉತ್ತರ ಪ್ರದೇಶದ ಮವೂ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 2005ರಲ್ಲಿ ಇವರ ಅಪಹರಣವಾಗಿ, ಹತ್ಯೆಯಾಗಿತ್ತು.

ಗಾಝಿಯಾಬಾದ್​ನಲ್ಲಿರುವ ತಮ್ಮ ಹುಟ್ಟೂರಾದ ಗೊಂಡೌರ್​ ಹಳ್ಳಿಗೆ ತೆರಳುತ್ತಿದ್ದಾಗ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿ, ಹತ್ಯೆಗೈದಿದ್ದರು. ಕೃಷ್ಣಾನಂದ್​ ರೈ ಜತೆ ಅವರ 6 ಸಹಾಯಕರ ಹತ್ಯೆಯಾಗಿತ್ತು. ಮುಖ್ತಾರ್ ಅನ್ಸಾರಿಯೇ ಈ ಕೃತ್ಯ ಮಾಡಿಸಿದ್ದ ಎಂಬ ಆರೋಪದಡಿ, ಆತನನ್ನು ಬಂಧಿಸಲಾಗಿತ್ತು. ಈ ಪ್ರಕರಣ ಸಂಬಂಧ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆಯಾಗಿದೆ.

ಮುಖ್ತಾರ್ ಅನ್ಸಾರಿ ವಿರುದ್ಧ ಹಲವು ಕ್ರಿಮಿನಲ್ ಕೇಸ್​ಗಳಿದ್ದು, ಜೈಲರ್‌ ಒಬ್ಬರಿಗೆ ಪಿಸ್ತೂಲು ತೋರಿಸಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇತ್ತೀಚೆಗೆ ಅಲಹಾಬಾದ್‌ ಹೈಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್