ಸಂಗ್ರಹ ಚಿತ್ರ 
ದೇಶ

ಏಕರೂಪ ನಾಗರಿಕ ಸಂಹಿತೆಯ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲು ನಿರ್ಧರಿಸಿದ ಉತ್ತರಾಖಂಡ!

ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲು ರಚಿಸಲಾದ ತಜ್ಞರ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲಿದ್ದು ಸಮಿತಿಯ ಅವಧಿ ಮೇ 27ಕ್ಕೆ ಕೊನೆಗೊಳ್ಳಲಿದೆ.

ಡೆಹ್ರಾಡೂನ್: ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲು ರಚಿಸಲಾದ ತಜ್ಞರ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲಿದ್ದು ಸಮಿತಿಯ ಅವಧಿ ಮೇ 27ಕ್ಕೆ ಕೊನೆಗೊಳ್ಳಲಿದೆ.

ಕರಡು ಅಂತಿಮಗೊಳಿಸಲು ಸಮಿತಿಗೆ ಹೆಚ್ಚಿನ ಸಮಯ ಬೇಕಾಗಿರುವುದರಿಂದ ವಿಸ್ತರಣೆಗೆ ಬೇಡಿಕೆ ಉದ್ಭವಿಸಿದೆ ಎಂದು ಸಮಿತಿಯ ಹಿರಿಯ ಸದಸ್ಯ ಶತ್ರುಘ್ನ ಸಿಂಗ್ ಹೇಳಿದ್ದಾರೆ.

ಮದುವೆ, ವಿಚ್ಛೇದನ, ಆಸ್ತಿ ಹಕ್ಕುಗಳು, ಉತ್ತರಾಧಿಕಾರ, ದತ್ತು, ನಿರ್ವಹಣೆ, ನಾಗರಿಕ ಹಕ್ಕುಗಳು ಮತ್ತು ಇತರ ಹಲವು ವಿಷಯಗಳ ಕುರಿತು ಕೋಡ್ ಅನ್ನು ರಚಿಸಬೇಕಾಗಿದೆ ಎಂದು ಶತ್ರುಘ್ನ ಸಿಂಗ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಸಮಿತಿಯು ಇದುವರೆಗೆ 1.25 ಲಕ್ಷ ಸಲಹೆಗಳನ್ನು ಸ್ವೀಕರಿಸಿದ್ದು ಸಮಿತಿಯು ಸದ್ಯ ಅವುಗಳನ್ನು ಪರಿಶೀಲಿಸಲು ಮತ್ತು ಅಧ್ಯಯನ ಮಾಡಲು ಪ್ರಾರಂಭಿಸಿದೆ. ಸಮಿತಿಯ ಸದಸ್ಯರ ಪ್ರಕಾರ, ಯುಸಿಸಿ ಕರಡು ರಚನೆಯ ಶೇಕಡಾ 75ರಷ್ಟು ಕೆಲಸ ಮುಗಿದಿದೆ.

'ಸ್ವೀಕರಿಸಿದ ಸಲಹೆಗಳನ್ನು ಅಧ್ಯಯನ ಮಾಡಿದ ನಂತರ, ಸಮಿತಿಯು ಅದನ್ನು ಕರಡು ರೂಪದಲ್ಲಿ ಸರ್ಕಾರಕ್ಕೆ ರವಾನಿಸುತ್ತದೆ. ಅದರ ಒಪ್ಪಿಗೆಯ ನಂತರ ಸರ್ಕಾರವು ಅದನ್ನು ಕಾನೂನು ಇಲಾಖೆಗೆ ಪರೀಕ್ಷೆಗೆ ಕಳುಹಿಸುತ್ತದೆ ಎಂದು ಶತ್ರುಘ್ನ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT