ಪ್ರತಿಭಟನಾ ನಿರತ ಕುಸ್ತಿಪಟುಗಳು 
ದೇಶ

ಮೀಡಿಯಾಗಳು ಆಟಗಾರರ ಬದಲಿಗೆ ಬ್ರಿಜ್ ಭೂಷಣ್ ರನ್ನು ಬೆಂಬಲಿಸುತ್ತಿವೆ: ಪ್ರತಿಭಟನಾ ಕುಸ್ತಿಪಟುಗಳು!

ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆರೋಪಿಸಿದ್ದಾರೆ. ಮಾಧ್ಯಮಗಳು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಮಾತನಾಡಲು ವೇದಿಕೆ ನೀಡಬಾರದು ಎಂದು ಹೇಳಿದೆ.

ನವದೆಹಲಿ: ಕ್ರೀಡಾ ಪಟುಗಳ ಬದಲಿಗೆ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಮಾಧ್ಯಮಗಳು ಬೆಂಬಲಿಸುತ್ತಿವೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆರೋಪಿಸಿದ್ದಾರೆ. ಮಾಧ್ಯಮಗಳು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಮಾತನಾಡಲು ವೇದಿಕೆ ನೀಡಬಾರದು ಎಂದು ಹೇಳಿದೆ.

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಸಿಂಗ್ ಆರೋಪಗಳ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಈ ಪ್ರತಿಭಟನೆಯನ್ನು ರಾಜಕೀಯ ಪ್ರೇರಿತ ಎಂದು ಕರೆದಿದ್ದಾರೆ. 

ಬಿಜೆಪಿ ಸಂಸದ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಒಂದು ಪೋಕ್ಸೊ ಕಾಯ್ದೆ ಸೇರಿದಂತೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಬ್ರಿಜ್‌ ಭೂಷಣ್‌ ಸಿಂಗ್‌ ಅವರು ಕಳೆದ 12 ವರ್ಷಗಳಿಂದ ಡಬ್ಲ್ಯುಎಫ್‌ಐ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. 

ಆಟಗಾರರಿಗಿಂತ ಮಾಧ್ಯಮಗಳು ಬ್ರಿಜ್ ಭೂಷಣ್ ಅವರನ್ನು ಬೆಂಬಲಿಸುತ್ತಿವೆ. ನೀವು ಅವರ ಕ್ರಿಮಿನಲ್ ದಾಖಲೆಗಳನ್ನು ನೋಡುತ್ತೀರಿ. ಇಲ್ಲಿ ಕುಳಿತಿರುವ ಯಾವುದೇ ಆಟಗಾರ ಅಥವಾ ಇತರ ಕ್ರೀಡೆಗಳ ಆಟಗಾರರು ಕ್ರಿಮಿನಲ್ ದಾಖಲೆ ಹೊಂದಿದ್ದಾರೆಯೇ? ಎಂದು ಕುಸ್ತಿಪಟು ಬಜರಂಗ್ ಪುನಿಯಾ ಪ್ರಶ್ನೆ ಮಾಡಿದ್ದಾರೆ. 

ದೇಶದ ಸಂಸತ್ ಸದಸ್ಯನಾಗುವುದಕ್ಕಿಂತ ಒಲಿಂಪಿಕ್ ಪದಕ ಗೆಲ್ಲುವುದು ಹೆಚ್ಚು ಕಷ್ಟಕರವಾಗಿದೆ ಎಂದು ಬಜರಂಗ್ ಪುನಿಯಾ ಹೇಳಿದ್ದಾರೆ.

'ಕ್ರೀಡಾಪಟುಗಳು ದೇಶಕ್ಕಾಗಿ ಪದಕಗಳನ್ನು ಗೆಲ್ಲುತ್ತಾರೆ ಮತ್ತು ಅವರು ಪದಕ ವಿಜೇತರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ದೇಶದಲ್ಲಿ ಎಷ್ಟು ಜನರು ಸಂಸದರಾಗುತ್ತಾರೆ ಮತ್ತು ಎಷ್ಟು ಜನರು ಒಲಿಂಪಿಕ್ ಪದಕಗಳನ್ನು ಗೆಲ್ಲುತ್ತಾರೆ. ಇಲ್ಲಿಯವರೆಗೆ 40 ಒಲಿಂಪಿಕ್ ಪದಕ ವಿಜೇತರು ಮತ್ತು ಸಾವಿರಾರು ಸಂಸದರು ಇದ್ದಾರೆ.

ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್, ಕುಸ್ತಿಪಟುಗಳ ಆರೋಪಗಳು ರಾಜಕೀಯ ಪ್ರೇರಿತ ಎಂದು ಸಿಂಗ್ ಅವರ ಹೇಳಿಕೆ ಆಧಾರರಹಿತವಾಗಿದೆ. ನಾವು ಯಾವುದೇ ರಾಜಕೀಯ ಮಾಡುತ್ತಿಲ್ಲ. ನಾವು ನಮ್ಮ ಹೃದಯದಿಂದ ಮಾತನಾಡುತ್ತೇವೆ ಮತ್ತು ನಮ್ಮೊಂದಿಗೆ ಹಲವಾರು ಜನರು ಇಲ್ಲಿ ಕುಳಿತಿರುವುದಕ್ಕೆ ಇದೇ ಕಾರಣ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT