ಭಾರತೀಯರ ರವಾನೆ 
ದೇಶ

ಆಪರೇಷನ್ ಕಾವೇರಿ: ಸಂಘರ್ಷ ಪೀಡಿತ ಸುಡಾನ್ ನಿಂದ ಬೆಂಗಳೂರಿಗೆ ಮತ್ತೆ 229 ಭಾರತೀಯರ ರವಾನೆ

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ  ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ದೆಹಲಿಗೆ ಕರೆತಂದಿದೆ.

ನವದೆಹಲಿ: ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ  ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ಬೆಂಗಳೂರಿಗೆ ಕರೆತಂದಿದೆ.

365 ಜನರು ಆಫ್ರಿಕನ್ ದೇಶ ಸುಡಾನ್ ನಿಂದ ದೆಹಲಿಗೆ ಮರಳಿದ ಒಂದು ದಿನದ ನಂತರ, ಮತ್ತೊಂದು ಬ್ಯಾಚ್ ನಲ್ಲಿ ಇಂದು 229 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ರವಾನೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, #OperationKaveri ಮತ್ತೊಂದು ವಿಮಾನವು 229 ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಕಾವೇರಿ ಹೆಸರಿನ ಸ್ಥಳಾಂತರಿಸುವ ಕಾರ್ಯಾಚರಣೆಯ ಅಡಿಯಲ್ಲಿ, ಶುಕ್ರವಾರ ಎರಡು ಬ್ಯಾಚ್‌ಗಳಲ್ಲಿ 754 ಜನರು ಭಾರತಕ್ಕೆ ಆಗಮಿಸಿದ್ದಾರೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಸುಡಾನ್‌ನಿಂದ ಮನೆಗೆ ಮರಳಿದ ಒಟ್ಟು ಭಾರತೀಯರ ಸಂಖ್ಯೆ ಈಗ 1,954 ಆಗಿದೆ. ಸೌದಿ ಅರೇಬಿಯಾದ ಜೆಡ್ಡಾ ನಗರದಿಂದ ಭಾರತೀಯರನ್ನು ಮರಳಿ ಕರೆತರಲಾಯಿತು, ಅಲ್ಲಿ ಭಾರತವು ಸ್ಥಳಾಂತರಿಸುವವರಿಗೆ ಶಿಬಿರವನ್ನು ಸ್ಥಾಪಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT