ಭಾರತೀಯರ ರವಾನೆ 
ದೇಶ

ಆಪರೇಷನ್ ಕಾವೇರಿ: ಸಂಘರ್ಷ ಪೀಡಿತ ಸುಡಾನ್ ನಿಂದ ಬೆಂಗಳೂರಿಗೆ ಮತ್ತೆ 229 ಭಾರತೀಯರ ರವಾನೆ

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ  ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ದೆಹಲಿಗೆ ಕರೆತಂದಿದೆ.

ನವದೆಹಲಿ: ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ  ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ಬೆಂಗಳೂರಿಗೆ ಕರೆತಂದಿದೆ.

365 ಜನರು ಆಫ್ರಿಕನ್ ದೇಶ ಸುಡಾನ್ ನಿಂದ ದೆಹಲಿಗೆ ಮರಳಿದ ಒಂದು ದಿನದ ನಂತರ, ಮತ್ತೊಂದು ಬ್ಯಾಚ್ ನಲ್ಲಿ ಇಂದು 229 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ರವಾನೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, #OperationKaveri ಮತ್ತೊಂದು ವಿಮಾನವು 229 ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಕಾವೇರಿ ಹೆಸರಿನ ಸ್ಥಳಾಂತರಿಸುವ ಕಾರ್ಯಾಚರಣೆಯ ಅಡಿಯಲ್ಲಿ, ಶುಕ್ರವಾರ ಎರಡು ಬ್ಯಾಚ್‌ಗಳಲ್ಲಿ 754 ಜನರು ಭಾರತಕ್ಕೆ ಆಗಮಿಸಿದ್ದಾರೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಸುಡಾನ್‌ನಿಂದ ಮನೆಗೆ ಮರಳಿದ ಒಟ್ಟು ಭಾರತೀಯರ ಸಂಖ್ಯೆ ಈಗ 1,954 ಆಗಿದೆ. ಸೌದಿ ಅರೇಬಿಯಾದ ಜೆಡ್ಡಾ ನಗರದಿಂದ ಭಾರತೀಯರನ್ನು ಮರಳಿ ಕರೆತರಲಾಯಿತು, ಅಲ್ಲಿ ಭಾರತವು ಸ್ಥಳಾಂತರಿಸುವವರಿಗೆ ಶಿಬಿರವನ್ನು ಸ್ಥಾಪಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT