ಬಾನ್ಸುರಿ ಸ್ವರಾಜ್ 
ದೇಶ

ದೆಹಲಿ ಬಿಜೆಪಿ ತಂಡಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸೇರ್ಪಡೆ

ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ...

ನವದೆಹಲಿ: ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ.

ಹರ್ಷ್ ಮಲ್ಹೋತ್ರಾ, ಯೋಗೇಂದ್ರ ಚಂದೋಲಿಯಾ ಮತ್ತು ಕಮಲ್ಜೀತ್ ಸೆಹ್ರಾವತ್ ಅವರು ಹೊಸದಾಗಿ ನೇಮಕಗೊಂಡ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.

ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಘೋಷಿಸಿರುವ ನೂತನ ತಂಡದಲ್ಲಿ ಬಾನ್ಸುರಿ ಸ್ವರಾಜ್ ಸೇರಿದಂತೆ ಹಲವು ಮಹಿಳಾ ಪದಾಧಿಕಾರಿಗಳೂ ಇದ್ದಾರೆ.

ಎಂಟು ಕಾರ್ಯದರ್ಶಿಗಳಲ್ಲಿ ಬಾನ್ಸುರಿ ಸ್ವರಾಜ್, ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹರೀಶ್ ಖುರಾನಾ ಮತ್ತು ಇಂಪ್ರಿತ್ ಸಿಂಗ್ ಬಕ್ಷಿ ಅವರು ಸೇರಿದ್ದಾರೆ.

ಹೊಸದಾಗಿ ನೇಮಕಗೊಂಡ ಎಂಟು ಉಪಾಧ್ಯಕ್ಷರಲ್ಲಿ ವಿಷ್ಣು ಮಿತ್ತಲ್, ದಿನೇಶ್ ಪ್ರತಾಪ್ ಸಿಂಗ್, ಮಾಜಿ ಮೇಯರ್ ಲತಾ ಗುಪ್ತಾ ಮತ್ತು ಮಾಜಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯೋಗಿತಾ ಸಿಂಗ್ ಇದ್ದಾರೆ.

ಲಕ್ಷ್ಮಿನಗರ ಶಾಸಕ ಅಭಯ್ ವರ್ಮಾ ಅವರು ದೆಹಲಿ ಬಿಜೆಪಿಯ ಮುಖ್ಯ ವಕ್ತಾರ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!