ಬಾನ್ಸುರಿ ಸ್ವರಾಜ್ 
ದೇಶ

ದೆಹಲಿ ಬಿಜೆಪಿ ತಂಡಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸೇರ್ಪಡೆ

ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ...

ನವದೆಹಲಿ: ಬಿಜೆಪಿ ಹಿರಿಯ ನಾಯಕಿ, ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರ ಒಳಗೊಂಡಂತೆ ಹಲವು ಯುವಕರನ್ನು ಹೊಂದಿರುವ ದೆಹಲಿ ಭಾರತೀಯ ಜನತಾ ಪಕ್ಷದ ಹೊಸ ಪದಾಧಿಕಾರಿಗಳ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ.

ಹರ್ಷ್ ಮಲ್ಹೋತ್ರಾ, ಯೋಗೇಂದ್ರ ಚಂದೋಲಿಯಾ ಮತ್ತು ಕಮಲ್ಜೀತ್ ಸೆಹ್ರಾವತ್ ಅವರು ಹೊಸದಾಗಿ ನೇಮಕಗೊಂಡ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.

ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಘೋಷಿಸಿರುವ ನೂತನ ತಂಡದಲ್ಲಿ ಬಾನ್ಸುರಿ ಸ್ವರಾಜ್ ಸೇರಿದಂತೆ ಹಲವು ಮಹಿಳಾ ಪದಾಧಿಕಾರಿಗಳೂ ಇದ್ದಾರೆ.

ಎಂಟು ಕಾರ್ಯದರ್ಶಿಗಳಲ್ಲಿ ಬಾನ್ಸುರಿ ಸ್ವರಾಜ್, ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹರೀಶ್ ಖುರಾನಾ ಮತ್ತು ಇಂಪ್ರಿತ್ ಸಿಂಗ್ ಬಕ್ಷಿ ಅವರು ಸೇರಿದ್ದಾರೆ.

ಹೊಸದಾಗಿ ನೇಮಕಗೊಂಡ ಎಂಟು ಉಪಾಧ್ಯಕ್ಷರಲ್ಲಿ ವಿಷ್ಣು ಮಿತ್ತಲ್, ದಿನೇಶ್ ಪ್ರತಾಪ್ ಸಿಂಗ್, ಮಾಜಿ ಮೇಯರ್ ಲತಾ ಗುಪ್ತಾ ಮತ್ತು ಮಾಜಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯೋಗಿತಾ ಸಿಂಗ್ ಇದ್ದಾರೆ.

ಲಕ್ಷ್ಮಿನಗರ ಶಾಸಕ ಅಭಯ್ ವರ್ಮಾ ಅವರು ದೆಹಲಿ ಬಿಜೆಪಿಯ ಮುಖ್ಯ ವಕ್ತಾರ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!